ಜನಶಕ್ತಿ

ಸ್ವಾತಂತ್ರ್ಯದ ಸಮರದಲ್ಲಿ ಸಾಮಾನ್ಯರು ಸತ್ತರು
ಬೆವರ ಬಸಿದು ಸಾವಿನಲ್ಲು ಕನಸುಗಳ ಹೆತ್ತರು ||

ಓದುಬರಹವು ಇಲ್ಲ ಕೂಲಿನಾಲಿಯೆ ಎಲ್ಲ
ಹೊಟ್ಟೆಕಟ್ಟುವ ಜನರು ಸಾಮಾನ್ಯರು
ಕತ್ತಲಿನ ಬಾಳಲ್ಲಿ ಸೂರ್ಯನ ಸುಳಿವಿಲ್ಲ
ದೇಶಕಟ್ಟುವ ಶಕ್ತಿ ಸಾಮಾನ್ಯರು ||

ಗುಡಿಸಲಿನ ಗರಿಯಲ್ಲಿ ಗೂಡುಕಟ್ಟಿದ ಸಿಟ್ಟು
ದಣಿಗಳಿಗೆ ಎದುರಾಗಿ ಸೆಟೆದು ಕುಂತು
ಜಾತಿ ಮತ ಧರ್ಮಗಳು ಹಿಂದೆ ಸರಿಯಲಿ ಹೆದರಿ
ಮಾನವತೆ ಮೊಳಗಲಿ ಬಿಡುಗಡೆಗೆ ನಿಂತು ||

ಬಾಳು ಬಿತ್ತಿದ ಬೀಜ ಬೆಳಕಿನ ತೆನೆಯೊಡೆದು
ಕೂಡಿಕೊಳ್ಳಲಿ ನಾಡ ಮಿಡಿತವನ್ನು
ಬಡವರ ಒಡಲಿನ ಸುಡುಬೆಂಕಿ ಕರಕರಗಿ
ಅಪ್ಪಿಕೊಳ್ಳಲಿ ಬೇಗ ಸಮತೆಯನ್ನು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಗುವುದಾದರೆ ಹೋಗು
Next post ಪರಿಹಾರ

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…