ಶ್ರಮ-ಸಂಸ್ಕೃತಿ

ಮಾನವನ ಬೆವರು ಬಾಳಿನ ತವರು
ಅರಿವಾಗಿ ಅರಳಿ ಬೆಳಕಾಯಿತು
ಸಂಸ್ಕೃತಿಗೆ ದುಡಿಮೆ ಬೇರಾಯಿತು ||

ಬಂಡೆಗಟ್ಟಿದ ಬೆಟ್ಟ
ಹಸಿರು ತುಂಬಿದ ಘಟ್ಟ
ಮಾನವನು ಮೈ ಏರಿ ಮಾತಾಡಿದ
ಹೋರಾಟ ನಡೆಸುತ್ತ
ಒಂದಾಗಿ ಬದುಕುತ್ತ
ಹೊಸ ಗೂಡು ಹುಡುಕುತ್ತ ನಡೆದಾಡಿದ ||

ಕಾಡು ಮೇಡಿನ ಹಾಡು
ಕೂಗಿ ಕರೆಯುವ ನಾಡು
ದುಡಿಮೆಗಾರನು ಕೊಟ್ಟ ಹೊಸತು ರೂಪ
ಸಿಡಿಲು ಸಂಚಿನ ಮೋಡ
ಬಿರುಗಾಳಿ ಮಳೆ ನೋಡ
ತಾಳಿದನು ಕೊರೆವ ಚಳಿ ಬಿಸಿಲ ತಾಪ ||

ಧುಮುಕಿದವು ಜಲಪಾತ
ಕೆಣಕಿದವು ಹಿಮಪಾತ
ಜಗ್ಗದೆಯೆ ಹೋರಾಡಿದ
ತಲೆಮಾರು ಕಳೆಯುತ್ತ
ಮನೆ ಮಾರು ಬೆಳೆಯುತ್ತ
ನೋವು ನಲಿವಿನ ನಡುವೆ ಉಸಿರಾಡಿದ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲಗು ಮುದ್ದಿನ ಕಣ್ಮಣಿ
Next post ಬುಗ್ಗೆಗಳು

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys