Home / ಲೇಖನ / ವಿಜ್ಞಾನ / ಒಂದು ಮನೋವೈಜ್ಞಾನಿಕ ವಿಶ್ಲೇಷಣೆ : ಹಿಂಸಾತ್ಮಕ ಕ್ರಿಯೆಗೆ ಸಿರೋಟೋನಿನ್ ಅಭಾವವೇ ಕಾರಣ

ಒಂದು ಮನೋವೈಜ್ಞಾನಿಕ ವಿಶ್ಲೇಷಣೆ : ಹಿಂಸಾತ್ಮಕ ಕ್ರಿಯೆಗೆ ಸಿರೋಟೋನಿನ್ ಅಭಾವವೇ ಕಾರಣ

ಜಗತ್ತಿನಲ್ಲಿ ದಿನನಿತ್ಯ ಹಿಂಸಾತ್ಮಕ ಕ್ರಿಯೆಗಳು ನಡೆಯುತ್ತಲೇ ಇರುತ್ತವೆ. ಒಬ್ಬ ವ್ಯಕ್ತಿ ನಿರ್ಧಯಿಯಾಗಿ ಅನೇಕ ವ್ಯಕ್ತಿಗಳನ್ನು ಕೊಲೆಗೈದು, ಅತ್ಯಾಚಾರವೆಸಗಿ, ರಕ್ತ ಪಿಪಾಸಿಯಾಗಿ ನಿರಂತರವಾಗಿ ನಡೆದುಕೊಳ್ಳುತ್ತಲೇ ಇರುತ್ತಾನೆ. ಇವನಲ್ಲಿ ಕರುಣೆ, ವಾತ್ಸಲ್ಯ, ಮಾನವತಾವಾದಗಳೆಲ್ಲ ಬತ್ತಿ ಕೇವಲ ಕ್ರೌರ್ಯ, ಹಿಂಸೆ, ನಿಷ್ಕರುಣೆಗಳು ಮಡುಗಟ್ಟಿರುತ್ತವೆ. ಏಕೆ ಹೀಗೆ ಈ ವ್ಯಕ್ತಿಗಳು ಮೆದುಳಿನ ಸಂದೇಶಗಳಲ್ಲಿ ಏನಾದರೂ ತಪ್ಪಾಗಿ ಹೀಗೆ ವರ್ತಿಸುತ್ತಿರಬಹುದೇ? ಎಂದು ಸಂಶೋಧನೆಗಳು ನಡೆದವು.

ಹಿಂಸಾತ್ಮಕ ಅಪರಾಧಗಳನ್ನು ಮಾಡುವವರ ಮೆದುಳಿನಲ್ಲಿ ಕೆಲವೊಂದು ಅಪಾಯಕಾರಿ ಲೋಹಗಳಿರುವುದನ್ನು ಇಬ್ಬರು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಲೋಹಮಾಲಿನ್ಯವುಳ್ಳ ರಾಷ್ಟ್ರಗಳಲ್ಲಿ ಹೆಚ್ಚಿನ ಪ್ರಮಾಣದ ಹಿಂಸಾಚಾರಗಳು ನಡೆದಿರುವ ನಿದರ್ಶನಗಳಿವೆ. ಕ್ಯಾಲಿಪೋರ್ನಿಯಾದಲ್ಲಿ ಜೇಮ್ಸ್ ಆಲಿವರ್ ಹಬರ್ಟ್ ಎಂಬಾತ ೧೯೮೪ ರಲ್ಲಿ ೨೧ ಜನರ ಸಮೂಹವನ್ನು ಕೊಲೆಮಾಡಿದ. ಆತನ ಕೂದಲಿನ ರಾಸಾಯನಿಕ ರಚನೆಯನ್ನು ಪರೀಕ್ಷಿಸಿದಾಗ ಅದರಲ್ಲಿ ಹೆಚ್ಚಿನ ಪ್ರಮಾಣದ ‘ಕ್ಯಾಡ್ಮಿಯಂ’ ಇದ್ದದ್ದು ಕಂಡು ಬಂದಿತು. ಕ್ಯಾಡ್ಮಿಯಂ ಲೋಹವು ಮೂತ್ರ ಜನಕಾಂಗವನ್ನು ನಾಶಮಾಡುತ್ತದೆ. ಹಬರ್ಟಿಯ ಮೂತ್ರ ಜನಕಾಂಗವನ್ನು ಪರೀಕ್ಷಿಸಿದಾಗ ಅದು ಮೊದಲೇ ಸಾಕಷ್ಟು ನಾಶವಾಗಿದ್ದುದು ಕಂಡು ಬಂದಿತು. ಇಲನೋಯಿಸ್‌ನ ಪಿಫೀಫರ್ ಚಿಕಿತ್ಸಾ ಕೇಂದ್ರ ಅಧ್ಯಕ್ಷರಾದ ವಿಲಿಯಂ.ಜೆ. ವಾಲ್ಫ್ ಅವರು ಇಂಥಹ ಅನೇಕ ನಿದರ್ಶನಗಳನ್ನು ಕಂಡಿದ್ದಾರೆ. ಶರೀರವು ಕೆಲವೊಂದು ಅಪಾಯಕಾರಿ ಲೋಹಗಳನ್ನು ನಿಭಾಯಿಸಲು ಸಾಧ್ಯವಾಗದೇ ಇದ್ದಾಗ ಮನುಷ್ಯನಿಗೆ ಸರಿ, ತಪ್ಪುಗಳ ಪರಿಕಲ್ಪನೆ ಇಲ್ಲದಂತಾಗುತ್ತದೆ ಎಂದು ಅವರು ಹೇಳುತ್ತಾರೆ. ೧೯೮೯ ರಲ್ಲಿ ಪಿಫೀಫರ್‌ನಲ್ಲಿ ಅನೇಕ ಹಿಂಸಾಚಾರಿ ಮಕ್ಕಳನ್ನು ಗಮನಿಸಲಾಯಿತು. ಇವರೆಲ್ಲ ತಮ್ಮ ೨ ವರ್ಷದ ವಯಸ್ಸಿನಿಂದಲೇ ಬೆಕ್ಕುಗಳಿಗೆ ಅತೀವ ಹಿಂಸೆ ಕೊಡುತ್ತಿದ್ದುದನ್ನು ಗಮನಿಸಿ ಅವರಿಗೆ ಕೊಡುತ್ತಿದ್ದ ಆಹಾರವನ್ನು ನಿಯಂತ್ರಿಸಿ ಅವರ ವರ್ತನೆಗಳನ್ನು ಹಿಡಿತಗೊಳಿಸಲಾಯಿತು.

ಡಾರ್ಟ್‌ಮೌಲ್ ಕಾಲೇಜಿನ ಪ್ರಾಧ್ಯಾಪಕರಾದ ರೆವೀಗರ್ ಡಿ- ಮಾಸ್ಟರ್‍ಸ್ ಎಂಬುವವರು ಇದೇ ರೀತಿಯಾದ ಸಂಶೋಧನೆಗಳನ್ನು ಮಾಡಿ ದೃಡೀಕರಿಸಿದ್ದಾರೆ. ಸೀಸ ಮತ್ತು ಮ್ಯಾಂಗನೀಸ್‌ಗಳು ಸಹ ಮೆದುಳಿನ ರಾಸಾಯನಿಕ ರಚನೆಯಲ್ಲಿ ಬದಲಾವಣೆಗಳನ್ನು ಮಾಡಿ ಕಲಿಕೆಯ ಸಮಸ್ಯೆಗಳು, ವರಟು ವರ್ತನೆ, ಹಿಂಸೆ ಇತ್ಯಾದಿಗಳಿಗೆ ಕಾರಣವಾಗುವವು ಎಂದು ಕಂಡು ಹಿಡಿಯಲಾಯಿತು. ಕೆಲವೊಂದು ಗ್ರಾಮೀಣ ಬಾಲಕರಲ್ಲಿ ಬುದ್ಧಮಾಂದ್ಯತೆಗೂ ಇದು ಕಾರಣವಾಗಿದೆ, ಎಂದು ತಿಳಿದು ಬರುತ್ತದೆ. ಮ್ಯಾಂಗನೀಜ್‌ನಿಂದ ಮಾನಸಿಕ ಪ್ರತಿಕ್ರಿಯೆಗಳ ನಿಯಂತ್ರಣವು ಕ್ಷೀಣಿಸಿ ಹಿಂಸಾತ್ಮಕ ವರ್ತನೆ ತೋರುವುದೆಂದು ತಿಳಿದು ಬಂದಿದೆ. ಸೀಸ ಮತ್ತು ಮ್ಯಾಂಗನೀಸ್‌ಗಳು ಎಲ್ಲ ಕಡೆ ಹರಡುತ್ತಲಿವೆ. ನರವಿಜ್ಞಾನಿಗಳ ಪ್ರಕಾರ ಮ್ಯಾಂಗನೀಸ್ ವಸ್ತುವು ಮೆದುಳಿನಲ್ಲಿರುವ ‘ಸಿರೋಟೋನಿನ್’ ಎಂಬ ಪದಾರ್ಥದ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದೊಂದು ನರಪ್ರಸರಣ ದ್ರವ (Neurotransmitter) ಮೆದುಳಿನ ಸಂದೇಶಗಳು ಪ್ರಸಾರವಾಗಲು ಈ ದ್ರವವೇ ಕಾರಣವಾಗುತ್ತದೆ. ಮಾಸ್ಟರ್ಸ್ ಅವರ ಪ್ರಕಾರ ಎಲ್ಲ ಹಿಂಸಾತ್ಮಕ (ಒರಟುತನ, ಅಪತ್ಕಾರಿತನ) ಮತ್ತು ಇತರ ಮನೋವೈಜ್ಞಾನಿಕ ತೊಂದರೆಗಳಿಗೆ ಸಿರೋಟೋನಿನ್‌ನ ಕೊರತೆಯೇ ಕಾರಣವಾಗಿದೆ. ಸರಿಯಾದ ವಿಟಾಮಿನ್‌ಗಳ ಪೂರೈಕೆಗಳಿಂದ ಈ ವೈಪರೀತ್ಯವನ್ನು ಸರಿಪಡಿಸಿಬಹುದೆಂದು ಅವರು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...