Home / ಕವನ / ಕವಿತೆ / ಪ್ರಾರ್ಥನೆ

ಪ್ರಾರ್ಥನೆ

ಕದಳಿಯ ಸುಳಿಯೇ
ಕದಳಿಯ ಹೂವೇ
ಕದಳಿಯ ಫಲವೇ
ನಿಮ್ಮೆಲ್ಲರನೂ ಒಂದ ಬೇಡುವೆನು

ಹರನೇ ತನಗೆ ಗಂಡನಾಗಬೇಕೆಂದು
ಅನುದಿನವೂ ಹಂಬಲಿಸಿ
ಸಾವಿಲ್ಲದ ರೂಹಿಲ್ಲದ ಕೇಡಿಲ್ಲದ
ಚೆಲುವನನು ಬೆಂಬತ್ತಿ ನಿಮ್ಮೀ
ಕದಳಿ ಬನವ ಪೊಕ್ಕ ನನ್ನಕ್ಕ
ಹೊಳೆವ ಕೆಂಜೆಡೆಗಳ ಸುಲಿಪಲ್ಲ
ಗೊರವನನು ಇದಿರಿಸಿದ
ಬಗೆಯ ಬಣ್ಣಿಸಿರೆ…

ಸರ್ವಭರಿತವಾಗಿ ಮುಖದೋರಿದವನ
ನಿರುಕಿಸಿ ನಿಬ್ಬೆರಗಾದಳೆ ನನ್ನಕ್ಕ?
ಆ ಬೆರಗಿನ ಸೊಬಗ ಬಣ್ಣಿಸಿರೆ…

ಭವಗೆದ್ದು ಬಂದ ಮಗಳೆ ಬಾರೆಂದು
ಕರುಣದಿ ಕೈವಿಡಿದು ಬಿಗಿದಪ್ಪಿದನಲ್ಲವೆ
ಆ ಗೊರವ….
ಆ ದಿವ್ಯ ನೋಟದ ಮಾಟವ ಬಣ್ಣಿಸಿದೆ…

ಕಳವಳಿಸಿ ಕಲ್ಪಿಸಿ, ಕಂದಿ, ಕುಂದಿದವಳ
ಕಾಡಿಸಿ ಕೊನೆಗೊಮ್ಮೆ
ಕಾಮನಬಿಲ್ಲಿನಂತೆ ಮುಖದೋರಿದ
ಚನ್ನನನು ಕಂಡು ಉರಿದಳೆ? ಜರಿದಳೆ?
ಹಿರಿಹಿರಿ ಹಿಗ್ಗಿದಳೆ?!

ಆ ಹಿಗ್ಗಿನ ಬುಗ್ಗೆಯಿಂದ ಒಂದಿಷ್ಟು
ಸಿಹಿನೀರ ಮೊಗದು ಎನಗುಣಿಸಿರೆ…

ನಾನಾಕೆಯ ಕೆಳದಿ
ಕುಸುಮದ ಹಂಗು ತೊರೆದು,
ಅಕ್ಕನನು ಅನುಸರಿಸಿ
ಬೆಟ್ಟಗುಡ್ಡ ಕಣಿವೆ ಕಾನನಗಳಲಿ
ಸುಳಿಸುಳಿದು ಬಂದ ಅಣುರೇಣು
ರುಂಡ ಮಾಲೆಯ ಕೊರಳವನ
ಹೃದಯ ಕಮಲದೊಳಡಗಿದವಳ
ಸಡಗರಕ್ಕೆ ಸಾಕ್ಷಿಯಂತಿರುವ
ದಿವ್ಯ ಚಕ್ಷುಗಳೇ…

ನೀವು ಬಣ್ಣಿಸದಿದ್ದರೆ
ನನ್ನಕ್ಕ ಒಲಿದು ಕೂಡಿದ
ಶ್ರೀಗಿರಿಯ ಗಾರುಡಿಗ
ಆ ಮಲ್ಲಿನಾಥನ ಮೇಲಾಣೆ!
*****

Tagged:

One Comment

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...