Home / ಕವನ / ಕವಿತೆ / ಪ್ರಾರ್ಥನೆ

ಪ್ರಾರ್ಥನೆ

ಕದಳಿಯ ಸುಳಿಯೇ
ಕದಳಿಯ ಹೂವೇ
ಕದಳಿಯ ಫಲವೇ
ನಿಮ್ಮೆಲ್ಲರನೂ ಒಂದ ಬೇಡುವೆನು

ಹರನೇ ತನಗೆ ಗಂಡನಾಗಬೇಕೆಂದು
ಅನುದಿನವೂ ಹಂಬಲಿಸಿ
ಸಾವಿಲ್ಲದ ರೂಹಿಲ್ಲದ ಕೇಡಿಲ್ಲದ
ಚೆಲುವನನು ಬೆಂಬತ್ತಿ ನಿಮ್ಮೀ
ಕದಳಿ ಬನವ ಪೊಕ್ಕ ನನ್ನಕ್ಕ
ಹೊಳೆವ ಕೆಂಜೆಡೆಗಳ ಸುಲಿಪಲ್ಲ
ಗೊರವನನು ಇದಿರಿಸಿದ
ಬಗೆಯ ಬಣ್ಣಿಸಿರೆ…

ಸರ್ವಭರಿತವಾಗಿ ಮುಖದೋರಿದವನ
ನಿರುಕಿಸಿ ನಿಬ್ಬೆರಗಾದಳೆ ನನ್ನಕ್ಕ?
ಆ ಬೆರಗಿನ ಸೊಬಗ ಬಣ್ಣಿಸಿರೆ…

ಭವಗೆದ್ದು ಬಂದ ಮಗಳೆ ಬಾರೆಂದು
ಕರುಣದಿ ಕೈವಿಡಿದು ಬಿಗಿದಪ್ಪಿದನಲ್ಲವೆ
ಆ ಗೊರವ….
ಆ ದಿವ್ಯ ನೋಟದ ಮಾಟವ ಬಣ್ಣಿಸಿದೆ…

ಕಳವಳಿಸಿ ಕಲ್ಪಿಸಿ, ಕಂದಿ, ಕುಂದಿದವಳ
ಕಾಡಿಸಿ ಕೊನೆಗೊಮ್ಮೆ
ಕಾಮನಬಿಲ್ಲಿನಂತೆ ಮುಖದೋರಿದ
ಚನ್ನನನು ಕಂಡು ಉರಿದಳೆ? ಜರಿದಳೆ?
ಹಿರಿಹಿರಿ ಹಿಗ್ಗಿದಳೆ?!

ಆ ಹಿಗ್ಗಿನ ಬುಗ್ಗೆಯಿಂದ ಒಂದಿಷ್ಟು
ಸಿಹಿನೀರ ಮೊಗದು ಎನಗುಣಿಸಿರೆ…

ನಾನಾಕೆಯ ಕೆಳದಿ
ಕುಸುಮದ ಹಂಗು ತೊರೆದು,
ಅಕ್ಕನನು ಅನುಸರಿಸಿ
ಬೆಟ್ಟಗುಡ್ಡ ಕಣಿವೆ ಕಾನನಗಳಲಿ
ಸುಳಿಸುಳಿದು ಬಂದ ಅಣುರೇಣು
ರುಂಡ ಮಾಲೆಯ ಕೊರಳವನ
ಹೃದಯ ಕಮಲದೊಳಡಗಿದವಳ
ಸಡಗರಕ್ಕೆ ಸಾಕ್ಷಿಯಂತಿರುವ
ದಿವ್ಯ ಚಕ್ಷುಗಳೇ…

ನೀವು ಬಣ್ಣಿಸದಿದ್ದರೆ
ನನ್ನಕ್ಕ ಒಲಿದು ಕೂಡಿದ
ಶ್ರೀಗಿರಿಯ ಗಾರುಡಿಗ
ಆ ಮಲ್ಲಿನಾಥನ ಮೇಲಾಣೆ!
*****

Tagged:

One Comment

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...