Home / ಕವನ / ಕವಿತೆ / ಪ್ರಾರ್ಥನೆ

ಪ್ರಾರ್ಥನೆ

ಕದಳಿಯ ಸುಳಿಯೇ
ಕದಳಿಯ ಹೂವೇ
ಕದಳಿಯ ಫಲವೇ
ನಿಮ್ಮೆಲ್ಲರನೂ ಒಂದ ಬೇಡುವೆನು

ಹರನೇ ತನಗೆ ಗಂಡನಾಗಬೇಕೆಂದು
ಅನುದಿನವೂ ಹಂಬಲಿಸಿ
ಸಾವಿಲ್ಲದ ರೂಹಿಲ್ಲದ ಕೇಡಿಲ್ಲದ
ಚೆಲುವನನು ಬೆಂಬತ್ತಿ ನಿಮ್ಮೀ
ಕದಳಿ ಬನವ ಪೊಕ್ಕ ನನ್ನಕ್ಕ
ಹೊಳೆವ ಕೆಂಜೆಡೆಗಳ ಸುಲಿಪಲ್ಲ
ಗೊರವನನು ಇದಿರಿಸಿದ
ಬಗೆಯ ಬಣ್ಣಿಸಿರೆ…

ಸರ್ವಭರಿತವಾಗಿ ಮುಖದೋರಿದವನ
ನಿರುಕಿಸಿ ನಿಬ್ಬೆರಗಾದಳೆ ನನ್ನಕ್ಕ?
ಆ ಬೆರಗಿನ ಸೊಬಗ ಬಣ್ಣಿಸಿರೆ…

ಭವಗೆದ್ದು ಬಂದ ಮಗಳೆ ಬಾರೆಂದು
ಕರುಣದಿ ಕೈವಿಡಿದು ಬಿಗಿದಪ್ಪಿದನಲ್ಲವೆ
ಆ ಗೊರವ….
ಆ ದಿವ್ಯ ನೋಟದ ಮಾಟವ ಬಣ್ಣಿಸಿದೆ…

ಕಳವಳಿಸಿ ಕಲ್ಪಿಸಿ, ಕಂದಿ, ಕುಂದಿದವಳ
ಕಾಡಿಸಿ ಕೊನೆಗೊಮ್ಮೆ
ಕಾಮನಬಿಲ್ಲಿನಂತೆ ಮುಖದೋರಿದ
ಚನ್ನನನು ಕಂಡು ಉರಿದಳೆ? ಜರಿದಳೆ?
ಹಿರಿಹಿರಿ ಹಿಗ್ಗಿದಳೆ?!

ಆ ಹಿಗ್ಗಿನ ಬುಗ್ಗೆಯಿಂದ ಒಂದಿಷ್ಟು
ಸಿಹಿನೀರ ಮೊಗದು ಎನಗುಣಿಸಿರೆ…

ನಾನಾಕೆಯ ಕೆಳದಿ
ಕುಸುಮದ ಹಂಗು ತೊರೆದು,
ಅಕ್ಕನನು ಅನುಸರಿಸಿ
ಬೆಟ್ಟಗುಡ್ಡ ಕಣಿವೆ ಕಾನನಗಳಲಿ
ಸುಳಿಸುಳಿದು ಬಂದ ಅಣುರೇಣು
ರುಂಡ ಮಾಲೆಯ ಕೊರಳವನ
ಹೃದಯ ಕಮಲದೊಳಡಗಿದವಳ
ಸಡಗರಕ್ಕೆ ಸಾಕ್ಷಿಯಂತಿರುವ
ದಿವ್ಯ ಚಕ್ಷುಗಳೇ…

ನೀವು ಬಣ್ಣಿಸದಿದ್ದರೆ
ನನ್ನಕ್ಕ ಒಲಿದು ಕೂಡಿದ
ಶ್ರೀಗಿರಿಯ ಗಾರುಡಿಗ
ಆ ಮಲ್ಲಿನಾಥನ ಮೇಲಾಣೆ!
*****

Tagged:

One Comment

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...