Home / ಕವನ / ಕವಿತೆ / ಮಹಮದನ ಪ್ರೇಮಪತ್ರ

ಮಹಮದನ ಪ್ರೇಮಪತ್ರ

ಹತ್ತೂ ಜನರು ಓದಿಯಾದ ಮೇಲೆ
ನನ್ನ ಕೈಸೇರಿತು ಮಹಮದನ ಪತ್ರ

ತನ್ನೂರಿನ ಬಗ್ಗೆ
ತನ್ನ ಅಕ್ಕ ತಂಗಿಯರ ಬಗ್ಗೆ
ಮಲ್ಪೆಯ ಮೀನು, ಸಮುದ್ರದ ಹಿನ್ನೀರು
ಗೇರು ಹಣ್ಣು, ಗುಳ್ಳದ ಬಗ್ಗೆ
ಏನೆಲ್ಲ ಅಚ್ಚ ಕನ್ನಡದಲ್ಲಿ
ಬರೆದಿದ್ದ ಪತ್ರ
‘ಈದ್’ಗೆ ಮನೆಗೆ ಬರಲೇಬೇಕೆಂದು
ಕೇಳಿಕೊಂಡಿದ್ದ ಪತ್ರ

ಅದರಲ್ಲಿ ಪ್ರೇಮದ ವಿಷಯವೇನೂ
ಇರಲಿಲ್ಲವಾದರೂ
ಅದು ಪ್ರೇಮ ಪತ್ರವೆಂದು
ಮುದ್ರೆ ಒತ್ತಲ್ಪಟ್ಟಿತು
ಮಹಮದನಿಗೆ ಗುದ್ದು
ನನಗೆ ಎಚ್ಚರಿಕೆ
ಹತ್ತು ಹಲವು ಹದ್ದುಗಳು
ನನ್ನ-ಅವನ
ಚಲನವಲನದ ಬಗ್ಗೆ
ನಿಗಾ ಇಡುವಂತಾಯಿತು

ಒಮ್ಮೆ ಮಹಮದನನ್ನು
ಭೇಟಿಯಾಗಬೇಕು
‘ಪ್ರೇಮ ಭಾವ’
ಅರಳಿಸಿದ್ದಕ್ಕೇ
ಕ್ಷಮೆ ಬೇಡಬೇಕು ಎಂದೆಲ್ಲಾ
ಅಂದುಕೊಂಡೆನಾದರೂ…

ಪ್ರತಿಬಾರಿ…
ನಮ್ಮಿಬ್ಬರ ನಡುವೆ
ಮಸೀದಿಯ ಗುಡ್ಡ
ಅಡ್ಡ ಬರುತ್ತಿತ್ತು

ಅದೊಂದು ದಿನ-
ದೊಡ್ಡ ದೇವರ ಪಲ್ಲಕ್ಕಿ ಉತ್ಸವ
ಇಬ್ಬರನೂ ಸೀಳಿಕೊಂಡು
ಹೊರಟು ಹೋಯಿತು!

ಹೂವಿನಷ್ಟೇ ತಾಜ-ಕೋಮಲ
ಮಹಮದನ ಪ್ರೇಮ
ವಜ್ರದಷ್ಟೇ ಕಠಿಣ-ಕಠೋರ
ಸುತ್ತಣ ಜನರ ಆತ್ಮ…

ಗಾಳಿ-ಬೆಂಕಿ ಸೇರಿಕೊಂಡು
ತನಗೆ ತಾನೇ ಕೂಡಿಕೊಂಡು
ಎಷ್ಟು ಸುತ್ತು ಉರಿದರೇನು
ಎಷ್ಟು ಹೊತ್ತು ಉರಿದರೇನು
ಉರಿಯೊಳಗೆ ಬಿರಿಯುತ್ತಿತ್ತು
ಬಿರಿದು ತಾನೇ ಬೆಳಗುತ್ತಿತ್ತು
ಪ್ರೇಮ ಪುಷ್ಪ ಅರಳುತ್ತಿತ್ತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...