Home / ಕವನ / ಕವಿತೆ / ಮಹಮದನ ಪ್ರೇಮಪತ್ರ

ಮಹಮದನ ಪ್ರೇಮಪತ್ರ

ಹತ್ತೂ ಜನರು ಓದಿಯಾದ ಮೇಲೆ
ನನ್ನ ಕೈಸೇರಿತು ಮಹಮದನ ಪತ್ರ

ತನ್ನೂರಿನ ಬಗ್ಗೆ
ತನ್ನ ಅಕ್ಕ ತಂಗಿಯರ ಬಗ್ಗೆ
ಮಲ್ಪೆಯ ಮೀನು, ಸಮುದ್ರದ ಹಿನ್ನೀರು
ಗೇರು ಹಣ್ಣು, ಗುಳ್ಳದ ಬಗ್ಗೆ
ಏನೆಲ್ಲ ಅಚ್ಚ ಕನ್ನಡದಲ್ಲಿ
ಬರೆದಿದ್ದ ಪತ್ರ
‘ಈದ್’ಗೆ ಮನೆಗೆ ಬರಲೇಬೇಕೆಂದು
ಕೇಳಿಕೊಂಡಿದ್ದ ಪತ್ರ

ಅದರಲ್ಲಿ ಪ್ರೇಮದ ವಿಷಯವೇನೂ
ಇರಲಿಲ್ಲವಾದರೂ
ಅದು ಪ್ರೇಮ ಪತ್ರವೆಂದು
ಮುದ್ರೆ ಒತ್ತಲ್ಪಟ್ಟಿತು
ಮಹಮದನಿಗೆ ಗುದ್ದು
ನನಗೆ ಎಚ್ಚರಿಕೆ
ಹತ್ತು ಹಲವು ಹದ್ದುಗಳು
ನನ್ನ-ಅವನ
ಚಲನವಲನದ ಬಗ್ಗೆ
ನಿಗಾ ಇಡುವಂತಾಯಿತು

ಒಮ್ಮೆ ಮಹಮದನನ್ನು
ಭೇಟಿಯಾಗಬೇಕು
‘ಪ್ರೇಮ ಭಾವ’
ಅರಳಿಸಿದ್ದಕ್ಕೇ
ಕ್ಷಮೆ ಬೇಡಬೇಕು ಎಂದೆಲ್ಲಾ
ಅಂದುಕೊಂಡೆನಾದರೂ…

ಪ್ರತಿಬಾರಿ…
ನಮ್ಮಿಬ್ಬರ ನಡುವೆ
ಮಸೀದಿಯ ಗುಡ್ಡ
ಅಡ್ಡ ಬರುತ್ತಿತ್ತು

ಅದೊಂದು ದಿನ-
ದೊಡ್ಡ ದೇವರ ಪಲ್ಲಕ್ಕಿ ಉತ್ಸವ
ಇಬ್ಬರನೂ ಸೀಳಿಕೊಂಡು
ಹೊರಟು ಹೋಯಿತು!

ಹೂವಿನಷ್ಟೇ ತಾಜ-ಕೋಮಲ
ಮಹಮದನ ಪ್ರೇಮ
ವಜ್ರದಷ್ಟೇ ಕಠಿಣ-ಕಠೋರ
ಸುತ್ತಣ ಜನರ ಆತ್ಮ…

ಗಾಳಿ-ಬೆಂಕಿ ಸೇರಿಕೊಂಡು
ತನಗೆ ತಾನೇ ಕೂಡಿಕೊಂಡು
ಎಷ್ಟು ಸುತ್ತು ಉರಿದರೇನು
ಎಷ್ಟು ಹೊತ್ತು ಉರಿದರೇನು
ಉರಿಯೊಳಗೆ ಬಿರಿಯುತ್ತಿತ್ತು
ಬಿರಿದು ತಾನೇ ಬೆಳಗುತ್ತಿತ್ತು
ಪ್ರೇಮ ಪುಷ್ಪ ಅರಳುತ್ತಿತ್ತು.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...