Home / ಕವನ / ಕವಿತೆ / ಜಾತ್ರೆಯಲ್ಲಿ ಶಿವ

ಜಾತ್ರೆಯಲ್ಲಿ ಶಿವ


ಅದೇ ಆ ಶಿವನ ವೇಷಧಾರಿ
ನಾನಿದ್ದ ಬಸ್ಸಿನಲ್ಲಿಯೇ ಇದ್ದ
ನನ್ನೊಂದಿಗೆ ಬಸ್ಸಿನಿಂದಿಳಿದ

ತೇಗದ ಮರದ ಹಾಗೆ
ಉದ್ದಕೆ ಸಪೂರ
ಮೋಡದ ಮೈ ಬಣ್ಣ, ಮಿಂಚಿನ ನಗು
ಮುಡಿಗೆ ತಗಡಿನ ಚಂದ್ರನನು ಮುಡಿದಿದ್ದ
ತೋಳಿಗೆ ಕಣಗಿಲೆಯ ಹೂವು
ಕೊರಳಲ್ಲಿ ಪ್ಲಾಸ್ಟಿಕ್ ಹಾವು
ಹುಲಿ ಚರ್ಮದ ಚಿತ್ರವಿರುವ
ಮಾಸಿದ ಹಳದಿ ಬಣ್ಣದ ಅರ್ಧ ಲುಂಗಿ
ಹವಾಯಿ ಚಪ್ಪಲಿ ಧರಿಸಿದ್ದ…

ನನ್ನ ಬೆರಗಿಗೆ ಉತ್ತರ
ನೀಡುವವನಂತೆ
ಡಮರುಗ ನುಡಿಸಿ
ತ್ರಿಶೂಲ ಆಡಿಸಿ
ಕಾಲ್ಗೆಜ್ಜೆ ಗಲಗಲ ಕುಣಿಸಿ
ನ…ಶಿವ ಎಂದ


ನಾ…ಮುಂದೆ ಅವ…ಹಿಂದೆ
ಜಾತ್ರೆಯ ಕೌಂಟರಿನಲ್ಲಿ
ಟಿಕೀಟು ಕೊಳ್ಳುವಾಗಲೂ
ಬೆನ್ನ ಹಿಂದೆಯೇ ಇದ್ದ
ಗಿಲೀಟು ಒಡವೆಯಂಗಡಿಯಲ್ಲಿ

ಕಣ್ಣ ಮುಂದೆಯೇ ಬಂದ
ಫಳಫಳ ಹೊಳೆಯುವ
ಮೂಗುತಿಯನು ಅಂಗೈಯೊಳಗೆ
ಹೊರಳಾಡಿಸಿ
ಈ ವಜ್ರಕ್ಕೆಷ್ಟಪ್ಪಾ ಬೆಲೆ
ಎಂದು ಅಂಗಡಿಯಾತನ ಛೇಡಿಸಿದ

ಪುಗ್ಗೆಯಂಗಡಿಯಲ್ಲಿ ಒಂದೊಂದೂ
ಪುಗ್ಗೆಯ ಮೇಲೂ ಮೃದುವಾಗಿ ಕೈಯಾಡಿಸಿ
ಪರಪರ ಶಬ್ದಕ್ಕೆ ಕಿವಿಯಾನಿಸಿ
ಬಾಗಿಲು ದಾಟುವುದರೊಳಗೆ
ಠುಸ್ಸೆನ್ನುವುದೀ ಪುಗ್ಗೆ, ಜೊತೆಗೆ
ಹಿಗ್ಗಿನ ಬಗ್ಗೆ ಎಂದು ಅಲ್ಲೇ ಪದ ಕಟ್ಟಿ ಹಾಡಿ
ಒಂದು ಪೀಪಿ, ಒಂದು ವಾಚು ಪುಕ್ಕಟೆ ಪಡೆದ

ಬಣ್ಣ ಬಣ್ಣದ ಪರಕಾರಗಳ ತೆಗೆಸಿ
ಪೂರ ಅಂಗಡಿಯನೆ ಎಳೆದಾಡಿಸಿ
ಚೌಕಾಸಿ ಬೆಲೆಯಲ್ಲೇ
ಒಂದು ಗಜ ರವಿಕೆಯ ಬಟ್ಟೆ ಕೊಂಡ

ಕೆಂಪು ನೀರಿನ ಶರಬತ್ತಿನಂಗಡಿಯಲ್ಲಿ
ಗಿಣಿ ಶಾಸ್ತ್ರದವನೊಡನೆ ಹರಕು
ಛತ್ರಿಯ ಅಡಿಯಲ್ಲಿ…
ಕರಡಿ ಮಜಲು ಕುಣಿತದ
ಕರಡಿಯಾಸದವನೊಡನೆ
ಅಲ್ಲಿ…ಇಲ್ಲಿ…ಇಲ್ಲಿ…ಅಲ್ಲಿ
ಜಾತ್ರೆಯ ಉದ್ದಗಲ ಹಬ್ಬಿ ನಿಂತವನು
ಮೋಟು ಬೀಡಿಯ ಸೇದುತ್ತ
ಕಡಲೆಯ-ಪುರಿಯ
ಗುಡ್ಡವ ದಾಟಿ ಹೋದ


ಹೋದ ಎನ್ನುವಷ್ಟರಲ್ಲಿಯೇ
ಬತ್ತಾಸಿನ ಅಂಗಡಿಯಲ್ಲಿ
ಪರಿಚಿತ ನಗೆಯೊಡನೆ ಪ್ರತ್ಯಕ್ಷ!

ಮೆಲ್ಲನೆ ಬಳಿ ಸರಿ ಗೋಣ ಬಗ್ಗಿಸಿ
ಮಗ ಹಸಿದಿದ್ದಾನೆ-
ಹೆಂಡತಿಗೆ ಕಾಯಿಲೆ ಅಂದ
ಬಾಡಿದ ಮುಖ, ಬಸಿದಿತ್ತು ದುಃಖ

ಗಣಪ ಹಸಿದಿದ್ದಾನೆ
ಗಿರಿಜೆಗೆ ಕಾಯಿಲೆ…
ಹೆಂಡತಿ-ಮಕ್ಕಳಿಗಾಗಿ
ಶಿವನಲ್ಲದೆ ಭವಿ ಅಳುವನೆ?!

ಪುಟ್ಟ ಪರ್ಸಿನ ಮೂಲೆ ಮೂಲೆಯನು ತಡವಿ
ರುದ್ರನೊಡ್ಡಿದ ಬೊಗಸೆಗೆ
ಐದರ ನೋಟಿರಿಸಿ ಇಷ್ಟೇ ಅಂದೆ!

ಮಿಂಚಂತ ಹೊಳೆದು
ತಳಾಂಗು ತದಿಗಿಣ ತೋಂ ಎಂದು
ನಾಟ್ಯದ ಮಟ್ಟಿನಲಿ ಕುಣಿದು
ಅರ್ಧ ನಿಮೀಲಿತ ನೇತ್ರವಾಗಿ
ನಟರಾಜನ ಭಂಗಿಯಲ್ಲಿ ನಿಂತುಬಿಟ್ಟ!

ಬಿಟ್ಟ ಬಾಯಿ ಬಿಟ್ಟಂತೆಯೇ
ನೆಟ್ಟ ಕಣ್ಣು ನೆಟ್ಟಂತೆಯೇ
ಎರಡೂ ಕೈ ಜೋಡಿಸಿ
ಮೈದುಂಬಿ ನುಡಿದು ಬಿಟ್ಟೆ…

ಸಾಕ್ಷಾತ್ ಶಿವ…
ಸಾಕ್ಷಾತ್ ಶಿವ!!
*****

Tagged:

One Comment

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...