ಭುವನ ಸುಂದರಿ

ಎಲ್ಲರೂ ಬೆಚ್ಚಗೆ ಹೊದ್ದು ಮಲಗಿರಲು
ಇವಳು ಎದ್ದು ಜಿಮ್‌ನಲ್ಲಿ ಬೆವರು
ಸುರಿಸುತ್ತಾ ಕಸರತ್ತು ಮಾಡುವಳು

ಎಲ್ಲರೂ ಹಾಲು ತುಪ್ಪದಲ್ಲಿ
ಕೈತೊಳೆದರೆ-
ಇವಳು ಹಣ್ಣು-ತರಕಾರಿ
ಒಣಗಿದ ಚಪಾತಿಯ
ಮೇಲೆಯೇ ಜೀವಿಸುವಳು

ಎದುರಿಗೆ ಯಾರೂ ಇಲ್ಲ
ಆದರೂ ಕೈ ಬೀಸುವಳು
ಕಾರಣವೆ ಇಲ್ಲ
ಸುಮ್ಮನೆ ನಗುವಳು
ಬಳುಕಿ ಬಾಗಿ
ಬೆಕ್ಕಿನ ಹೆಜ್ಜೆಯನನುಸರಿಸಿ
ತಾಲೀಮು ನಡೆಸುವಳು

ತಲೆಯೊಳಗೆ ಏನೆಲ್ಲ ತುಂಬಿಕೊಂಡು
ಗಿಳಿಯಂತೆ ಒಪ್ಪವಾಗಿ
ಪಾಠ ಒಪ್ಪಿಸುವಳು
ಚಾಣದಿಂದ ಕಲ್ಲು ಕೆತ್ತಿದ ಹಾಗೆ
ಇವಳ ಅಂಗ ಅಂಗವನೂ
ಕತ್ತಿ ಸ್ಪರ್ಧೆಗೆ ಅಣಿ ಮಾಡುವರು
ಇಷ್ಟು ಮೊಲೆ, ಇಷ್ಟೇ ನಿತಂಬ
ಸುರಿದು-ಅಳೆಯುವರು

ಒಂದು ದಿನ-
ಕೋರೈಸುವ ಬೆಳಕಿನಂಗಳದಲ್ಲಿ
ಕಿರೀಟವಿರಿಸಿಕೊಂಡು
ಸಿಂಹಾಸನದಲಿ ಕೂತು
ಸುಂದರಿಯರ ನಡುವೆ
ಮಹಾಸುಂದರಿಯಾಗಿ
ಮರೆಯುವಳು

ಚಪ್ಪಾಳೆ, ಕೇಕೆ, ಶಿಳ್ಳೆ
ಹೇಳಿ ಎಷ್ಟು ಜನಕೆ
ಈ ಭಾಗ್ಯ ದೊರೆಯುವುದು?
ಅಲೆಯ ಮೇಲಣ ಗುಳ್ಳೆಯೋ
ಪದ್ಮ ಪತ್ರದ ಮೇಲಣ ಜಲಬಿಂದುವೋ
ಅದು ಆಮೇಲಿನ ಮಾತು

ಜಗತ್ತು ಒಂದು ಚಣವಾದರೂ
ಕಣ್ಣರಳಿಸಿ, ಇವಳತ್ತ ನೋಡುವುದು
ಮತ್ತೋಬ್ಬಳು ಬರುವ ತನಕ
ಇವಳತ್ತಲೇ ನೋಡುತ್ತಾ ಇರುವುದು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನವಿಲುಗರಿ – ೧೩
Next post ಗುಣ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…