ಚಿತೆಗೇರಲಿಲ್ಲ ಹೂವುಗಳು

ಗಾಳಿ ತಂದಿತು
ದೀಪವಾರಿದ ಸುದ್ದಿ

ಒಂದು ಚಣ ಮೌನ
ನೋಡು ಎಂದಿತು ಹೃದಯ
ಬೇಡವೆಂದಿತು ಮನಸು

ನಿಮ್ಮ ಚಿತೆಗೇರಿಸಬೇಕೆಂದು
ಕೊಂಡಿದ್ದ ಎರಡು ನಸು ಹಳದಿ
ಗುಲಾಬಿ ಮೊಗ್ಗುಗಳು
ಇನ್ನೂ ಹಾಗೆಯೇ ಇವೆ
ನಳನಳಿಸುತ್ತಿವೆ ಹೂದಾನಿಯಲ್ಲಿ

ಸದ್ಯ ಬೂದಿಯಾಗಲಿಲ್ಲ
ಹೂವುಗಳು…
ಏನೋ ಸಮಾಧಾನ

ನಿಮ್ಮನ್ನು ದ್ವೇಷಿಸುತ್ತಲೇ
ಪ್ರೀತಿಸಿದೆವು ನಾವು
ನೀವೇ ಕಲಿಸಿದ ಪಾಠ
ವೈಭವೀಕರಿಸಲಾರೆ ನಿಮ್ಮ ಸಾವು

ಉಳಿದಷ್ಟು ದಿನ
ಉಳಿದೇ ಉಳಿಯುವುದು
ಅಗಲಿಕೆಯ ನೋವು

(ಪಿ. ಲಂಕೇಶ್‍ಗೆ ಶ್ರದ್ಧಾಂಜಲಿ)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೩
Next post ಊಸುರವಳ್ಳಿ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…