ಚಿತೆಗೇರಲಿಲ್ಲ ಹೂವುಗಳು

ಗಾಳಿ ತಂದಿತು
ದೀಪವಾರಿದ ಸುದ್ದಿ

ಒಂದು ಚಣ ಮೌನ
ನೋಡು ಎಂದಿತು ಹೃದಯ
ಬೇಡವೆಂದಿತು ಮನಸು

ನಿಮ್ಮ ಚಿತೆಗೇರಿಸಬೇಕೆಂದು
ಕೊಂಡಿದ್ದ ಎರಡು ನಸು ಹಳದಿ
ಗುಲಾಬಿ ಮೊಗ್ಗುಗಳು
ಇನ್ನೂ ಹಾಗೆಯೇ ಇವೆ
ನಳನಳಿಸುತ್ತಿವೆ ಹೂದಾನಿಯಲ್ಲಿ

ಸದ್ಯ ಬೂದಿಯಾಗಲಿಲ್ಲ
ಹೂವುಗಳು…
ಏನೋ ಸಮಾಧಾನ

ನಿಮ್ಮನ್ನು ದ್ವೇಷಿಸುತ್ತಲೇ
ಪ್ರೀತಿಸಿದೆವು ನಾವು
ನೀವೇ ಕಲಿಸಿದ ಪಾಠ
ವೈಭವೀಕರಿಸಲಾರೆ ನಿಮ್ಮ ಸಾವು

ಉಳಿದಷ್ಟು ದಿನ
ಉಳಿದೇ ಉಳಿಯುವುದು
ಅಗಲಿಕೆಯ ನೋವು

(ಪಿ. ಲಂಕೇಶ್‍ಗೆ ಶ್ರದ್ಧಾಂಜಲಿ)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೩
Next post ಊಸುರವಳ್ಳಿ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

cheap jordans|wholesale air max|wholesale jordans|wholesale jewelry|wholesale jerseys