ಮುಂದೆ ಸಾಗುವ ಮುನ್ನ

ಮುಂದೆ ಸಾಗುವ ಮುನ್ನ
ಹಿಂದೆ ನೋಡಬಾರದೆ ಒಮ್ಮೆ
ನದಿಯಲ್ಲವೇ ನಾನು
ತುದಿಯಲ್ಲಿರುವೆ ನೀನು
ನಿಲ್ಲು ನಿಲ್ಲು ನೀ ನನ್ನ ಮಗಳೆ…

ಹಿಟ್ಟು-ರೊಟ್ಟಿಯ ಸುಡುತ
ಹರಕೆ-ಮುಡಿಪುಗಳನಿಡುತ
ತಿಳಿದ ಹಾಡುಗಳ ಹಾಡಿ
ನೂರು ದೇವರ ಕಾಡಿ
ನಿನ್ನ ಪಡೆದೆ

ಉಟ್ಟ ಸೀರೆಯೇ ಮೂರು
ಹಣೆಗೆ ಕುಂಕುಮದ ಚೂರು
ಎದೆಗವಚಿಕೊಂಡೇ ನಿನ್ನ
ರಂಗೋಲೆಯ ಬರೆದೆ

ದೇಶ ನೋಡಲೇ ಇಲ್ಲ
ಕೋಶ ಓದಲೇ ಇಲ್ಲ
ಕಾಡ ಕಣಗಿಲೆ ನಾನು
ಚಿಗುರು ಕೆಂಪೆಲೆ ನೀನು
ಆಚೆ ದಡದಲ್ಲೇನಿದೆಯೋ
ನಾನೇನು ಬಲ್ಲೆ?

ನಿನ್ನ ಆಶೆಯೇ ಬೇರೆ
ನನ್ನ ಭಾಷೆಯ ಬೇರೆ
ಬೇರಲ್ಲವೇ ನಾನು
ಹೂವಲ್ಲವೇ ನೀನು
ತಿರುಗಿ ನೋಡೊಮ್ಮೆ ನನ್ನ ಮಗಳೆ…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೪
Next post ದಂಡ

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…