ಮತ್ತೆ ಹುಟ್ಟುವುದಾದರೆ…

ಮತ್ತೆ ಹುಟ್ಟವುದಾದರೆ
ಈ ನೆಲವೇ ಇರಲಿ
ಹುಟ್ಟಿದ ಮೇಲೆನ್ನ ನುಡಿಯು
ಕನ್ನಡವೇ ಆಗಿರಲಿ

ತುಂಗೆಯಲಿ ನಾನಿರಲು
ಗಂಗೆಯೂ ಬರಲಿ
ಕೃಷ್ಣ-ಗೋದಾವರಿ
ಗೆಳತಿಯರು ಸಿಗಲಿ

ಹಿಮಾಲಯವು ಮುಡಿಯಲ್ಲಿ
ಸಹ್ಯಾದ್ರಿಯು ಅಡಿಯಲ್ಲಿ
ಅಲ್ಲಲ್ಲಿಯೇ ಇರಲಿ
ಕಲ್ಕತ್ತೆಯ ಕಾಳಿ
ಶೃಂಗೇರಿಯ ಶಾರದೆಗೆ
ಹೂವು-ಕುಂಕುಮ ಕೊಡಲಿ
ದೂರದಲ್ಲೇಕೆ ಇರಬೇಕು ದೆಹಲಿ
ಶಿವಮೊಗ್ಗೆಗೇ ಬರಲಿ

ಮತ್ತೆ ಹುಟ್ಟುವುದಾದರೆ
ಈ ನೆಲವೇ ಇರಲಿ
ಮಂಗಳೂರಿನ ಕಡಲು
ಮಡಿಕೇರಿಯ ಮಂಜಿನೊಡಲು
ನನಗೊದಗಿ ಬರಲಿ

ಹಟ್ಟಿ ಚಿನ್ನದ ಬುಗುಡಿ
ಕಾರವಾರದ ಸೀಗಡಿ
ತುಟ್ಟಿಯಾಗದೇ ಇರಲಿ

ಸೊರಗದಿರಲಿ ಬೇಲೂರಿನ ಬಾಲೆ
ಒಣಗದಿರಲಿ ಜೋಗದ ಮೋರೆ
ಇಳಕಲ್ಲಿನ ಸೀರಗೆ
ಕಾಶ್ಮೀರದಲ್ಲೂ ಬೆಲೆ ಸಿಗಲಿ

ಮತ್ತೆ ಹುಟ್ಟುವುದಾದರೆ
ಈ ನೆಲವೇ ಇರಲಿ
ಮೇಲುಕೋಟೆಯ ಚೆಲುವ
ನನಗೊಲಿದು ಬರಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೬
Next post ಶಿಕ್ಷಣ

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

cheap jordans|wholesale air max|wholesale jordans|wholesale jewelry|wholesale jerseys