ನವೋದಯದ ನಲವು : ಜಿ ಎಸ್ ಎಸ್

ನವಿರಾದ ಭಾವದಲೆಗಳ
ಸೀಳುತ್ತಾ ಮುನ್ನುಗ್ಗುತ್ತಿತ್ತು
ನವ್ಯದ ಹಡಗು

ಆಹಾ! ಏನು ಬಿಂಕ, ಬೆಡಗು, ಬಿನ್ನಾಣ
ಕೋಡುಗಲ್ಲಿನ ಮೇಲೆ
ಕಡಲ ಹಕ್ಕಿಗಳಂತೆ ಕೂತು ನೋಡಿದೆವು.

ಕಾರಿರುಳು-
‘ಕರಿಯ ನಭದ ಕಣ್ಗಳಂತೆ
ಅಭಯದೊಂದು ರೂಹಿನಂತೆ
ತೇಲಿಬಿಟ್ಟ ದೀಪದಂತೆ’
ನೂರು ತಾರೆ ಬೆಳಕ ಬೀರಲು
ಪುಟ್ಟ ದೋಣಿಯಲಿ ಕೂತು
ರಾತ್ರಿ-ಹಗಲು ರಾಕ್ಷಸ ಅಲೆಗಳನ್ನು ತಳ್ಳುತ್ತಾ
ಹರಸಾಹಸದಿಂದ ದಡ ಸೇರಿದೆವು.

ಮುಸ್ಸಂಜೆ-
ಆಗಸದಲ್ಲಿ ಬೆಳ್ಳಕ್ಕಿಗಳ ಸಾಲು
‘ದೇವರ ರುಜು’
ಪರವಶತೆಯಿಂದ ನೋಡಿದೆವು.
ಕಣಿವೆಯ ಮುದುಕ
ಕೈ ಮರವಾದ; ಮುನ್ನಡೆದೆವು.
‘ಮೂಡಲ ಮನೆಯಲ್ಲಿ ಮುತ್ತಿನ ನೀರು
ಗಿಡಗಂಟೆಗಳ ಕೊರಳಲ್ಲಿ ಹಕ್ಕಿಗಳ ಹಾಡು’
ತಲೆದೂಗಿದೆವು.

ಶಾನುಭೋಗರ ಮಗಳು
ಕಾಲಿಗೆ ನೀರಿತ್ತು ಕೈತುತ್ತು ನೀಡಿದಳು;
‘ಎನಿತು ಜನ್ಮದಲಿ ಎನಿತು ಜೀವರಿಗೆ
ಎನಿತು ನಾವು ಋಣಿಯೋ’ ತಲೆಬಾಗಿದೆವು.

ಹಾದಿಯ ತುಂಬಾ
ನಗುತ್ತಿತ್ತು ಏಳುಸುತ್ತಿನ ಮಲ್ಲಿಗೆ
‘ಹಚ್ಚನೆ ಹಸುರ ಗಿಡದಿಂದೆಂತು
ಮೂಡಿತ್ತೋ ಬೆಳ್ಳಗೆ’
-ಅನತಿ ದೂರದಲ್ಲೇ ಕಲ್ಲು ಬಂಡೆಯನ್ನೇರಿ
ಅದಾರೋ… ಯಾರವರು, ಯಾರು?
ಎದೆತುಂಬಿ ಹಾಡುತ್ತಿದ್ದರು.

ಹಮ್ಮು-ಬಿಮ್ಮು ಸೋಕದ ಹಾಡು
ನೊಂದ ಜೀವರಿಗೆ ತಂಪನೀಯುವ ಹಾಡು
ಪ್ರೀತಿ-ಸ್ನೇಹಗಳ ಪಸರಿಸುವ ಹಾಡು
ಎಲ್ಲೋ ಅಳುವ ಮಗುವನೂ ಸಂತೈಸುವ ಹಾಡು
ನವ-ನವೀನ ಭಾವದ ಹಾಡು.

ಹಾಡಿನ ಹಾಡಿಯಲ್ಲಿ ಬೀಡುಬಿಟ್ಟು
ಹಾಡಿಗೆ ನಮ್ಮನ್ನೇ ನಾವು ಕೊಟ್ಟು ಕೊಂಡೆವು
ನೂರು ಭಾವದ ಬಾವಿ ಮೊಗೆ ಮೊಗದು
ಸಿಹಿನೀರ ಕುಡಿದೆವು

ಕಡಲನೀಜುವೆನೆಂಬ ಮರುಳ ಹಡಗು
ತನಗೆ ತಾ ಹೊರೆಯಾಗಿ ತಾನೆ ಮುಳುಗುತ್ತಿತ್ತು…
ಅಲೆಯ ಮೇಲೊಂದು ತಾವರೆಯ ಎಲೆ
ಎಲೆಯ ಮೇಲೊಂದು ಪುಟ್ಟ ಹಣತೆ
ತೇಲುತ್ತಿತ್ತು ತನ್ನ ಪಾಡಿಗೆ ತಾನೇ
ನೀಲ ಮೌನದಲ್ಲಿ…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೈಲ್ ಸಿಂಗ್ ನೆನಪಿನಲ್ಲಿ….
Next post ದಶಮಗ್ರಹ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys