Home / ಲೇಖನ / ಇತರೆ / ಗೆಳೆತನದ ಅಳತೆ

ಗೆಳೆತನದ ಅಳತೆ

ಅದನ್ನು ಅಳೆಯಬಹುದೇ? ಅದು ಒಂದು ಫೌಂಟನ್ ಪೇನಿಗಿಂತ ಉದ್ದವಿಲ್ಲವೆನ್ನುವವರಿವರು. ರಂಗಪ್ಪನೂ ವಾಸುವೂ ಗೆಳೆಯರು. ಅವರ ಗೆಳೆತನವೆಂದರೆ ಊರಲ್ಲೆಲ್ಲ ಹೆಸರಾದುದು. ಇಬ್ಬರೂ ದಿನದ ಇಪ್ಪತ್ತನಾಲ್ಕು ತಾಸುಗಳಲ್ಲಿಯೂ ಒಟ್ಟಿಗೆ ಇರುವರು. ಒಂದು ದಿನ ವಾಸುವಿಗೆ ರಂಗಪ್ಪನ ಮನೆಯಲ್ಲಿ ಊಟವಾದರೆ, ಮತ್ತೊಂದು ದಿನ ರಂಗಪ್ಪನಿಗೆ ವಾಸುವಿನ ಮನೆಯಲ್ಲಿ. ಇವರ ಸ್ನೇಹವು ಊರಲ್ಲಿ ನಿಜಕ್ಕೂ ಗಾದೆಯ ಮಾತಾಗಿ ಹೋಗಿದೆ.

ಒಂದು ದಿನ ವಾಸುವು ರಂಗಪ್ಪನಿಗೆ ಮೇರಿಪಿಕ್ ಫರ್ಡಳ ಚಿತ್ರವಿರುವ ಒಂದು ಪೋಸ್ಟ್ ಕಾರ್ಡನ್ನು ಪ್ರೇಮದಿಂದ, “ಬೇಡದೆ ಕೊಡಲು”, ರಂಗಪ್ಪನ ಪ್ರೇಮವು ಇಮ್ಮಡಿಯಾಗಿ ಉಕ್ಕಿ, “ವಾಸೂ-ನಮ್ಮ ಸ್ನೇಹವು ಜನ್ಮ ಜನ್ಮಕ್ಕೂ ಕಡಿದುಹೋಗಲಾರದು!” ಎಂದನು.

“ನವು ಮುಂದೆ ಎಲ್ಲಿಯಾದರೂ ಹುಳುಗಳಾಗಿ ಹುಟ್ಟಿದರೂ ಒಟ್ಟಿಗೇ ಹುಟ್ಟಿ-ಗೆಳೆತನದಿಂದಲೇ ಇರಬೇಕು!” ಎಂದನು ವಾಸು.

ಇಬ್ಬರೂ ಹೆಚ್ಚಿಗೇನೂ ಮಾತಾಡಲಾರದಾದರು, ಪ್ರೇಮದಿಂದ ಇಬ್ಬರ ಎದೆಗಳೂ ಉಬ್ಬಿ, ಉಸಿರಿಗೇ ಸ್ಥಳವಿರಲಿಲ್ಲ, ಕಂಠಗಳು ಪೂರ್ಣವಾಗಿದ್ದುವು.

ರಂಗಪ್ಪನ ಮನೆಯ ಆಸ್ತಿಯ ಲೆಕ್ಕಗಳನ್ನಿಡುವ ಕರಣೀಕನು ರಾಜಪ್ಪ. ಅವನಿಗೆ ರಂಗಪ್ಪನ ತಂದೆಯಿಂದ, ರಂಗಪ್ಪನಿಂದ, ರಂಗಪ್ಪನ ಸಂಬಂಧಿಕರಿಂದ, ಅತ್ತ ಇತ್ತ ಹೋಗುವಾಗ ತನ್ನನ್ನು ಪರಿಚಯದ ನಗುವಿನಿಂದ ಸನ್ಮಾನಿಸಿದವರಿಂದ ಸಾಲ ಬೇಡುವ ಅಭ್ಯಾಸ. ಅವನು ರಂಗಪ್ಪನ ತಂದೆಯಿಂದ ಪಡೆದ “ಅಡ್ವಾನ್ಸು”, ಅವನನ್ನು ಇನ್ನು ಮೂರು ವರ್ಷಗಳ ತನಕ ದುಡಿದು ಸಲ್ಲಿಸಬೇಕಾದ ಋಣಕಂಭಕ್ಕೆ ಬಂಧಿಸಿತ್ತು. ಅದರ ಮೇಲೆ ಅವನು ಮಾಡುತಿದ್ದುದೆಲ್ಲ “ಸಾಲ”. ರಂಗಪ್ಪನಿಗೆ ಅವನು ಕೊಡಬೇಕಾಗಿದ್ದುದು ಹನ್ನೆರಡಾಣೆಗಳು!

ರಂಗಪ್ಪನು ಆ ಹನ್ನೆರಡು ಆಣೆಗಳಿಗಾಗಿ ಹನ್ನೆರಡು ಯುಗ (ತಿಂಗಳು; – ತಿಂಗಳನ್ನು ರಂಗಪ್ಪನು, ತನ್ನನ್ನಾರಾದರೂ ದುಃಖಗೊಟ್ಟು ಪೀಡಿಸಿದರೆ ‘ಯುಗ’ವೆಂದು ನಾಮಕರಣ ಮಾಡುವನು.) ಪೇಚಾಡಿದನು. ಕೊನೆಗೆ, ಉಪಾಯಗಾಣದೆ, ರಾಜಪ್ಪನಿಗೆ ಬುದ್ಧಿಗಲಿಸಬೇಕೆಂದು, ಆತನ “ವಾಟರ್
ಮೇನ್” ಪೇನನ್ನು ಮೆಲ್ಲನೆ ಎತ್ತಿಬಿಟ್ಟನು.

“ಭದ್ರವಾಗಿಡು!” ಎನ್ನುತ್ತ ರ೦ಗಪ್ಪನು, ಅದನ್ನು ವಾಸುವಿನ ಕೈಯಲ್ಲಿ ಕೊಟ್ಟನು. ಗೆಳೆತನದ ಪ್ರಕಾಶವೆಲ್ಲವೂ ವಾಸುವಿನ ಮುಖದ ಮೇಲೆ ಮಿನುಗಿತು.

‘ಹಣದ ತಗಾದೆ’ ಎನ್ನುತ್ತಿರಲ್ಲ- ಅದು ಹೇಗೆ ಉಂಟಾಗುತ್ತದೆ ಎಂಬುದನ್ನು ಹೇಳುವುದು ತೀರ ಅನಾವಶ್ಯಕ. ನೀವೆಲ್ಲರೂ ಅದನ್ನು ಚೆನ್ನಾಗಿ ಬಲ್ಲಿರಿ; ಅನುಭವಿಸಿರುವಿರಿ. ಹೋಟೇಲಿನ ರಾಮಣ್ಣನು ವಾಸುವನ್ನು ಒಂದು ದಿನ ಹಣಕ್ಕಾಗಿ ಪೀಡಿಸಲು ವಾಸುವ ದಿಕ್ಕುಗೆಟ್ಟು, ಆ ಫೌಂಟನ್ ಪೇನನ್ನು ರಾಮನಾಯಕನೆಂಬಲ್ಲಿ ಒಂದು ರೂಪಾಯಿಗೆ ಒತ್ತೆ ಇಟ್ಟು, ಸಂಕಷ್ಟದಿಂದ ಪಾರಾದನು. ಅಂದೇ, ರಂಗಪ್ಪನು ಬಂದು, “ವಾಸೂ, ಆ ಫೌಂಟೆನ್‍ಪೇನ್ ಎಲ್ಲಿದೆ?” ಎಂದನು.

ಇಂತಹ ಸ್ಥಿತಿಯಲ್ಲಿ ನೀವೇನು ಮಾಡುವಿರಿ?

“ಮಿತ್ರಾ!”-ವಾಸುವಿನ ಕಂಠವು ಗದ್ಗದಿತವಾಯಿತು, “ಮಿತ್ರಾ! ಹೇಳಿದರೆ ನೀನು ನಂಬುವಿಯೋ ಇಲ್ಲವೋ! ಕೊಡಿ ಯಾಲಬೈಲಿನ ಆ ದೊಡ್ಡ ಹಳ್ಳದ ಮೇಲಿನ ಸಂಕವಿಲ್ಲವೇ? ನಿನ್ನೆ ಅದರ ಮೇಲೆ ನಿಂತು ಬಾಗಿ, ನೀರನ್ನು ನೋಡುತಿದ್ದಾಗ….. ‘ಕ್ಲಿಪ್ಪು’ ಸಿಕ್ಕಿಸಿರಲಿಲ್ಲ ಮಿತ್ರಾ… ಅಯ್ಯೋ ದೇವ… ನೀರಿಗೆ ಬಿದ್ದುದನ್ನು ಒಂದು ತಾಸು ಹುಡುಕಿದರೂ ಸಿಕ್ಕಲಿಲ್ಲ!” ಮಂದಾರ ಪುಷ್ಪವನ್ನು ಕಳಕೊಂಡ ಬಕಾವಲಿಯ ಚರ್ಯೆಗಿಂತಲೂ ಕರುಣಾಜನಕ ವಾದ ಚರ್ಯೆಯು ವಾಸುವಿನದು!

ರಂಗಪ್ಪನು ತನ್ನ ಕಿಸೆಯಿಂದ ಫೌಂಟನ್‌ಪೇನನ್ನು ವಾಸುವಿನ ಮುಂದೆ ಹಿಡಿದು ಸ್ಥಿರದೃಷ್ಟಿಯಿಂದ ಅವನನ್ನು ನೋಡುತ್ತ – “ದೇವರು ದೊಡ್ಡವನು; ಮಹಾ ಜಲಧಿಯಿಂದ ಇದನ್ನುದ್ಧರಿಸಿದನು, ರಾಮನಾಯಕನ ಕೈಯಿಂದ ಇದು ನನಗೆ ಸಿಕ್ಕಿತು. ನನ್ನ ಗೆಳೆತನದ ಬೆಲೆ ತಿಳಿಯಿತೇ?”

ವಾಸುವು ಮೌನ!

“ಒಂದು ರೂಪಾಯಿ!”
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...