ಹೃದಯವೆ ದೇವಾಲಯವಿಲ್ಲಿ

ಹೃದಯವೆ ದೇವಾಲಯವಿಲ್ಲಿ
ದೇವರು ಒಬ್ಬರೂ ಇಲ್ಲಿಲ್ಲ
ಇರುವುದು ದೇವತೆ ಮಾತ್ರ-ಆ
ದೇವಿಗೆ ಭಕ್ತ ನಾ ಮಾತ್ರ /ಪ//

ಎದೆ ಬಡಿತವೆ ಘಂಟಾನಾದ
ಕಣ್ಣೋಟದಲೆ ಆರತಿ
ತುಟಿ ಮಿಡಿತವೆ ಮಂಗಳಸ್ತೋತ್ರ
ಇದಕ್ಕೆ ಪ್ರಸನ್ನ ಮೂರುತಿ

ಹೊರಟರೆ ಅವಳು ಮೆರವಣಿಗೆ
ಎದೆಯಲಿ ಬೀದಿ ಮೂಡುವುದು
ತೆರೆದರೆ ಕಣ್ಣು ಕರುಣೆಯಲಿ
ಬದುಕಲಿ ಸುಗ್ಗಿ ಕಾಣುವುದು

ನನ್ನ ದೇವಿಗೆ ನಾ ಭಕ್ತ
ಎಲ್ಲಾ ವರಗಳಿಗೂ ಶಕ್ತ
ಇದರ ಪ್ರಕಟಣೆ ಬೇಕಿಲ್ಲ
ನಿಜ ಮುಕ್ತಿಗೆ ಇದು ಸಾಕಲ್ಲ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹದಿನಾರರ ಹರೆಯ
Next post ಅಧ್ಯಾಪಕರಿಲ್ಲ, ಜಾಗ್ರತೆ!

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys