Home / ಕವನ / ಕವಿತೆ / ಬೆಳಕನು ಅರಸಿ ಹೊರಟೆ

ಬೆಳಕನು ಅರಸಿ ಹೊರಟೆ

ಬೆಳಕನು ಅರಸಿ ಹೊರಟೆ ನಾ
ಕತ್ತಲ ಮನೆಯಿಂದ
ಕಂಡಿತು ಕೊನೆಗೂ ಬೆಳಕು ಅಲ್ಲಿ
ಬುದ್ಧನ ಹೆಸರಿಂದ
ಬುದ್ಧನ ಹೆಸರಿಂದ;
ಅರಿವಿನ ಉಸಿರಿಂದ /ಪ//

ದೇವರ ಬಗ್ಗೆ ಒಂದೂ
ಆಡಲಿಲ್ಲ ಮಾತು
ಗಾಳಿಯೊಡನೆ ಗುದ್ದಾಡಿ
ಕೂರಲಿಲ್ಲ ಬೆವೆತು
ನನ್ನ ಕುರಿತು ಮಾತಾಡಿದ;
ಅದರಲ್ಲೆ ಜಗ ತೋರಿದ

ಮೊಲದ ಕೊಂಬನು ಕುರಿತು
ನಡೆಯುತಿಹುದು ಚರ್ಚೆ
ಅದರಲ್ಲೇ ಬಣ ನೂರು
ಕಡೆಗೋ ನನಗೆ ಮೂರ್ಛೆ
ಬುದ್ಧ ಅಲ್ಲಿ ಎಚ್ಚರಿಸಿದ;
ಮೊಲಕೆ ಕೊಂಬು ಉಂಟೆ?
ಮೊಲಕೆ ಕೊಂಬು ಉಂಟೆ??

ಹುಟ್ಟಿದ ಮಾನವನಾಗಿ – ಬುದ್ಧ
ಸತ್ತನು ಮಾನವನಾಗಿ
ಆಡಿದ ಮಾನವನಾಗಿ – ದೀಪ
ಹಚ್ಚಿದ ಮಾನವನಾಗಿ
ಅದಕೆ ಈತ ಮಿಗಿಲು;
ಬುವಿಗೆ ಬೇಕು ಮುಗಿಲು

(ಅಗತ್ಯವಿದ್ದರೆ ಹಾಡುಗಾರಿಕೆಯಲ್ಲಿ ಈ ಕೆಳಗಿನ ಎರಡು ಸಾಲುಗಳನ್ನು ಪಲ್ಲವಿಗೆ ಮೊದಲು ಹಾಡಿಕೊಳ್ಳಬಹುದು –
ಬುದ್ಧ…. ಪ್ರಬುದ್ಧ….
ಬುದ್ಧ…. ಬೆಳಕಿಗೆ ಬದ್ಧ….)
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...