ಲಿಂಗಮ್ಮನ ವಚನಗಳು – ೨೨

ಬೈಲು ಬಯಲಲ್ಲಿ ಒಂದು ಮೃಗವು ಹುಟ್ಟಿತ್ತು.
ಅದ ಕಂಡಹೆನೆಂಬರಿಗೆ ಕಾಣಬಾರದು.
ಹೆಳಿಹೆನೆಂಬರಿಗೆ ಹೇಳಬಾರದು.
ಅದು ಚಿದ್ರೂಪ ಚಿನ್ಮಯವು.
ಅದು ಗೊತ್ತ ಮೆಟ್ಟಿ ಆಡುವದನರಿಯದೆ,
ಕತ್ತಲೆಯಲ್ಲಿ ಮುಳುಗಿ ಕಾಮನ
ಬಾಧೆಗೆ ಶಿಲ್ಕಿ ಎತ್ತಲೆಂದರಿಯದೆ,
ಭವಬಂದನದಲ್ಲಿ ಮುಳುಗಿ
ಕಾಲನ ಬಾಧೆಗೊಳಗಾಗಿ,
ಸತ್ತುಹುಟ್ಟುವ ಮನುಜರ
ಮತ್ತೆ ಶಿವಶರಣರ ಕೂಡಿ,
ತತ್ವವ ಬಲ್ಲೆವೆಂದು, ತರ್ಕಕ್ಕೆ ಬಾಹರು.
ಇದು ಹುಸಿ. ನಮ್ಮ ಶರಣರು ಇದ ಮೆಚ್ಚರು.
ತತ್ವವೆಂಬುದನೆ ಮೆಟ್ಟಿ ಮಿಥ್ಯವ
ನುಡಿವರ ತಮ್ಮ ಪುತ್ರರೆಂದು ಭಾವಿಸಿ,
ಸತ್ತುಹುಟ್ಟುವರ ನೊತ್ತರಿಸಿ,
ನಿಶ್ಚಿಂತದಲ್ಲಿ ನಿಜವ ನೆಮ್ಮಿ
ಬಟ್ಟ ಬಯಲೊಳಗಣ ಮೃಗದ ಗೊತ್ತ ಮೆಟ್ಟಿ,
ಬಚ್ಚ ಬರಿಯ ಬೆಳಗಿನೊಳಗಾಡುವ ಶರಣರ,
ಈ ಸತ್ತು ಮೆಟ್ಟಿ ಹುಳಿಸಿಕೊಂಬ,
ಮಿಥ್ಯವಾದಿಗಳೆತ್ತ ಬಲ್ಲರು ನಿಮ್ಮ ನೆಲೆಯ
ಅಪ್ಪಣಪ್ರಿಯ ಚನ್ನಬಸವಣ್ಣಾ?
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರ ಮತ್ತು ಹುಲ್ಲೆ
Next post ಜೀವದ ಒಳಗುಟ್ಟು

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys