ದೂಡಿದರೆ ನನ್ನನ್ನು

ದೂಡಿದರೆ ನನ್ನನ್ನು
ಸರಳುಗಳ ಹಿಂದೆ
ಕಾಣುವುದು ನೀವೇ
ಸರಳುಗಳ ಹಿಂದೆ – ನನಗೆ
ಕಾಣುವುದು ನೀವೇ
ಸರಳುಗಳ ಹಿಂದೆ ||

ಬದುಕು ಒಂದು ಆಟ
ಆಡಿ ನಲಿಯಬೇಕು
ಆಡಿ ನಲಿಯದಿರಲು
ನೋಡಿ ನಲಿಯಬೇಕು
ಸಂಚು ಹೊಂಚು ಏಕೆ?
ನಾ ಬರಿಯ ದೇಹವಲ್ಲ
ಕೊಲ್ಲಬಹುದು ಕೊನೆಗೆ
ನನಗೆ ಸಾವೆ ಇಲ್ಲ

ಕೊಂದವರು ಈವರೆಗೆ
ಉಳಿದ ನಿದರ್ಶನವಿಲ್ಲ
ಅಳಿದವರು ಮಾತ್ರ
ನಮ್ಮೊಳಗಿಹರಲ್ಲ
ಕತ್ತಲು ಓಡುವುದು
ಬೆಳಕನ್ನು ಕಂಡು
ಬೆಳಕು ಓಡುವುದೇ
ಕತ್ತಲನು ಕಂಡು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹರಿವ ತೊರೆಯ ಅಲೆ
Next post ದೇವರು ಮತ್ತು ಸೈತಾನ

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…