ನಿನ್ನ ಕೆಂದುಟಿಯಿಂದ

ನಿನ್ನ ಕೆಂದುಟಿಯಿಂದ ಬರೆ ಪ್ರೇಮ ಕಾವ್ಯವನು
ತೆರೆದಿರುವ ನನ್ನೆದೆಯ ಹಾಳೆ ಮೇಲೆ
ಭಾವಗೀತೆಯ ಮೀರಿ ಮಹಾಕಾವ್ಯ ಮೂಡಲಿ
ಅದ ಓದಿ ದಾಟುವೆನು ಜಗದ ಎಲ್ಲೆ //ಪ//

ಗಿಳಿ ಕೋಗಿಲೆ ಬೇಡ ನಿನ್ನ ಹಾಡಿನ ಎದುರು
ನವಿಲ ನರ್ತನವೇಕೆ ನೀನು ನಡೆವಾಗ
ಚುಕ್ಕಿ ಚಂದ್ರಮರೇಕೆ ನೀ ಕಣ್ಣು ತೆರೆದಾಗ
ಬೆಳದಿಂಗಳು ಬೇಡ ನೀನೆ ಇರುವಾಗ

ಹುಬ್ಬು ಹಾರಿಸಬೇಡ ರೆಪ್ಪೆ ಬಡಿಯಲುಬೇಡ
ಹಕ್ಕಿ ಸಹ ಗರಿ ಬಿಚ್ಚಿ ಮೇಲೆ ಹಾರಲಿ
ತುಟಿಯ ಕೊಂಕಿಸುವಾಗ ತಾವರೆಯು ನಿಸ್ತೇಜ
ಚೆಲುವ ಪ್ರಕೃತಿ ಮೇಲೆ ಕರುಣೆ ಇರಲಿ

ನಿನಗಿಲ್ಲ ಉಪಮಾನ ರೂಪಕವು ಸಹ ಇಲ್ಲ
ನಿನ್ನ ಸಂಗದ ಬಲವೆ ಕಾವ್ಯ ಸ್ಫೂರ್ತಿ
ಬರೆದ ಕಾವ್ಯಕೆ ನಾನು ಲಿಪಿಕಾರ, ಕವಿ ನೀನು
ಇದು ಅಲ್ಲವೆ ನಿನ್ನ ಪ್ರೀತಿ ನೀತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಂದು ಮುಂಜಾವಿನಲಿ
Next post ಕನ್ನಡ ಮಾಧ್ಯಮ : ಸಂವಿಧಾನದ ಸುತ್ತ ವ್ಯಾಖ್ಯಾನದ ಹುತ್ತ

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…