Home / ಕವನ / ಕವಿತೆ / ಬೆಳಕು ಮೂಡಿದ ಬಂಗಾಳ

ಬೆಳಕು ಮೂಡಿದ ಬಂಗಾಳ

ಬಂಗಾಳಕ್ಕೆ ಬಾಲ್ಯದಿಂದ
ಬೆಳಕಿನ ಕನಸು,
ಎಳೆದ ಗೆರೆ, ಬರೆದ ಅಕ್ಷರ, ಹರಿದ ದನಿ
ಎಲ್ಲದರಲ್ಲಿ
ಅದನ್ನೇ ಅರಸುವ ಮನಸು,
ಆಕಾಶದಂಗಳದಲ್ಲಿ
ಬಿಕ್ಕಿದ ಅಕ್ಕಿಕಾಳನ್ನೆಲ್ಲ
ಹೆಕ್ಕಿ ತರುವ ಹಬ್ಬಯಕೆ
ಈ ಹಕ್ಕಿಗೆ,
ಹೀಗಿದ್ದೂ ಅದನ್ನು
ಸುತ್ತಿ ನಿಂತ ಪಂಜರ
ಬಿರುಸು.

ಆದರೆ
ಮಾಯದ ಬಯಕೆ ಸಾಯುವುದಿಲ್ಲ,
ಬಣ್ಣ ಬಣ್ಣದ
ರಾಗ ನೇಯುತ್ತದೆ;
ನೋವು ನರಳು
ಕೋಪ ಕೆರಳು
ಬಿಗಿಯುವ ಉರುಳು ಬೆರಳು ಎಲ್ಲ
ಪೀತಾಂಬರ ಪೇಟೆ ತೆರೆಯುತ್ತವೆ;
ಆಸೆ ನೆಲವಾಗುತ್ತದೆ
ಹಾಸಿ ಜಲವಾಗುತ್ತದೆ
ಬೀಸಿ ಎಲರಾಗುತ್ತದೆ
ಉಣ್ಣುವ ಅನ್ನದಲ್ಲಿ ಸೇರಿ
ನಾಡಿನ ಉಸಿರಾಗುತ್ತದೆ.
ಆಗ ಪ್ರಾಣಕ್ಕೆ ಕವಡೆ ಬೆಲೆ
ಭಯ ದೈನ್ಯ ಲೋಭದಿಂದ
ಹಠಾತ್ ಬಿಡುಗಡೆ
ಸಾವಿನ ಬಾವಿಗಂಟಲಿಗೆ ಸುರಿದು ಹೋಗುತ್ತದೆ
ಪ್ರಾಣದ ನಿರರ್ಗಳ ಅಮೃತಧಾರೆ.

ಮೊನ್ನೆ
ಋತು ಕೆರಳಿತು ಬಂಗಾಳದಲ್ಲಿ.
ಮಾಗಿಯ ಕೊರೆತದಲ್ಲಿ
ಎಲ್ಲ ಕಡೆ ಬೋಳುಮರ, ಬಂಗಾಳದಲ್ಲಿ ಚಿಗುರು
ಕರುಳಿರಿಯುವ ಚಳಿಗೆ
ಭೂಗೋಳ ರಗ್ಗು ಹೊದ್ದಿದ್ದಾಗ
ಬಂಗಾಳಿಯ ಮೈಯಲ್ಲಿ ಕೆಂಪು ಬೆವರು;
ಹುಡುಗರ ಬಾಳೆಮೈ
ಹೂ ಬಿಟ್ಟ ಮುತ್ತುಗ,
ಹೆಣ್ಣಿನ ಮಾನ ಮೈ
ಕೀಚಕ ಕ್ರೀಡೆಗೆ ಗಜ್ಜುಗ,
ಎಂದಿನದೋ ಕಿಡಿ ಕೆರಳಿ
ದಳ ದಳ ದಳ ದಳ ಅರಳಿ
ಮೊಹರಂ ಕುಂಡ
ಭಾರಿ ಹೊಗೆ ಹಬ್ಬಿ
ಜಗತ್ತನ್ನೇ ತಬ್ಬಿ
ಪಶ್ಚಿಮದಲ್ಲಿ ಕೊಂಚ ಗೊಂದಲ
ಬೆಳಿಗ್ಗೆ ಎಲ್ಲ ಎದ್ದು
ಕಣ್ಣುಜ್ಜಿ ನೋಡುವಾಗ
ನಗುತ್ತಿದೆ ಪೂರ್ವದಲ್ಲಿ
ಬೆಳಕು ಮುಡಿದ ಬಂಗಾಳ *
*****
* ಬಾಂಗ್ಲಾದೇಶ ಸ್ವತಂತ್ರವಾದ ದಿನ ಬರೆದದ್ದು

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...