ನಿನ್ನೆಗೆ ನನ್ನ ಮಾತು

ನೆನಪಿನ ಕಾಡು ಸುತ್ತಲೂ ಹಬ್ಬಿ
ಎತ್ತಲೂ ಸುತ್ತ ರಾಗಗಳು
ವರ್ತಮಾನಕ್ಕೆ ಚಿತ್ರದ ಹಂಗೆ?
ಅವೆಲ್ಲ ಬರಿಯ ಹೃದ್ರೋಗಗಳು
ಸತ್ತ ನಾಗಗಳು – ಪಟ್ಟೆನಾರುಗಳು
ಛಲಕ್ಕೆ ಬಿದ್ದ ಸರ್‍ಪಧ್ವಜನ
ವಿಕಾರ ರೂಪಿನ ಊರುಗಳು

ನಾಳೆ ಇವತ್ತಿಗೆ ಕೊಡುವ ಈ ಅರ್ಥ
ಇವತ್ತು ನಿನ್ನಗೆ ಕೊಟ್ಟಿದ್ದರ್ಂತೇ ವ್ಯರ್ಥವ ?
ಎಂದು ಕಳಕಳಿಸಿ
ಸತ್ತವರ ಕರೆದು
ವರ್ಷಕ್ಕೊಮ್ಮೆಯಾದರೂ ಒಟ್ಟು ನಿಲ್ಲುತ್ತೇನೆ
ರೀತಿ ಬದಲಾದರೂ – ಅಯ್ಯ, ಪ್ರೀತಿಗೆ ವ್ಯವಸ್ಥೆಯೆ ? –
ವಿನ್ಯಾಸಕ್ಕೆ ತಕ್ಕ ನೆರಳು ಬೆರಸಿ
ಅನ್ಯಾಯವಿಲ್ಲ ಎಂದುಕೊಂಡರೂ
ಮನಮನೆಯೊಳಗುರಿವ ಹಗಲು
ಒಂದೇ ಎಂದುಕೊಳ್ಳುತ್ತೇನೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾರದ್ದು ವಿಷ?
Next post ಬಿನ್ನಾಣಗಿತ್ತಿ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…