ಲಿಂಗಮ್ಮನ ವಚನಗಳು – ೨೫

ತನ್ನ ತಾನರಿಯದೆ ಅನ್ಯರಿಗೆ ಬೋಧೆಯ
ಹೇಳುವ ಕುನ್ನಿಗಳೇ ನೀವು ಕೇಳಿರೋ.
ಅವರ ಬಾಳುವೆ ಎಂತೆಂದರೆ,
ಕುರುಡ ಕನ್ನಡಿಯ ಹಿಡಿದಂತೆ,
ತನ್ನೊಳಗೆ ಮರೆದು,
ಇದಿರಿಂಗೆ ಬೋಧೆಯ ಹೇಳಿ,
ಉದರವ ಹೊರೆವ ಛೀಮಾರಿಗಳೆಲ್ಲರು ಹಿರಿಯರೆ?
ಆಲ್ಲಲ್ಲ. ಇದ ಮೆಚ್ಚುವರು ನಮ್ಮ ಶರಣರು?
ಅವರ ನಡೆ ಎಂತೆಂದರೆ,
ಒಳಗನರಿದು ಹೊರಗೆ ಮರೆದು,
ತನುವಿನೊಳಗಣ ಅನುವು ಹಸುಗೆಯ ಮಾಡಿದರು.
ಪೃಥ್ವಿಗೆ ಅಪ್ಪುವಿನ ಅಧಿಕವ ಮಾಡಿದರು.
ಅಗ್ನಿಯ ಹುದುಗಿದರು.
ವಾಯವ ಬೀರಿದರು.
ಆಕಾಶದಲ್ಲಿ ನಿಂದರು. ಓಂಕಾರವನೆತ್ತಿದರು.
ಅದರೊಡಗೂಡಿದರು. ಪ್ರಾಣದ ನೆಲೆಯನರಿದರು.
ಪ್ರಮಾಣವನೊಂದುಗೂಡಿದರು. ಮಹಾಬೆಳಗಿನಲ್ಲಿ
ಓಲಾಡುವ ಶರಣರ ವಾಗ್ಜಾಲವ ಕಲಿತುಕೊಂಡು,
ನುಡಿವ ಕಾಕುಮನುಜರೆತ್ತ ಬಲ್ಲರು ನಿಮ್ಮ ನೆಲೆಯ
ಅಪ್ಪಣಪ್ರಿಯ ಚನ್ನಬಸವಣ್ಣಾ?
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಮನ ಬಿಲ್ಲಿನ ಚೂರು ಹೂವುಗಳು
Next post ತಪೋಭೂಮಿ – ಭಾರತ ವರ್ಷ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…