ಕನಸುಗಳು

ಕನಸುಗಳು

“ಕನಸು” ನಮ್ಮ ನಿದ್ರೆಯ ಅವಿಭಾಜ್ಯ ಅಂಗ. ಮಿದುಳಿನ ಹೈಪೋಥಲಮಸ್ ನಿದ್ರೆಯನ್ನು ನಿಯಂತ್ರಿಸುವ ಭಾಗ. ಹೀಗಾಗಿ ಕನಸು ಮೆದುಳಿನ ಚಟುವಟಿಕೆಯಾಗಿದೆ. ನಾವು ಒಂದು ಗಂಟೆ ನಿದ್ರೆ ಮಾಡಿದರೆ ಹತ್ತು ನಿಮಿಷ ಕನಸು ಕಾಣುತ್ತೇವೆ! ಅಂದರೆ ಪ್ರತಿರಾತ್ರಿ ನಾವು ಹತ್ತತ್ತು ನಿಮಿಷಗಳ ಕಾಲ ಐದಾರು ಸಲ ಕನಸು ಕಾಣುತ್ತೇವೆ. ಕನಸುಗಳನ್ನು ವೈಜ್ಞಾನಿಕವಾಗಿ ಅಭ್ಯಾಸ ಮಾಡಿದವರಲ್ಲಿ ಸಿಗ್ಮಂಡ್ ಫ್ರಾಯ್ಡ್ ಪ್ರಮುಖರು. ಇವರ ಪ್ರಕಾರ ನಮ್ಮ ಮನಸ್ಸಿನಲ್ಲಿ ಆಲೋಚನೆಗಳನ್ನು ಮಾಡುವ ಎರಡು ಪ್ರತಿನಿಧಿಗಳಿವೆ. ಒಂದು ಸುಪ್ತ ಮನಸ್ಸಿನಲ್ಲಿ ಇದ್ದರೆ ಇನ್ನೊಂದು ಜಾಗೃತ ಮನಸ್ಸಿನಲ್ಲಿರುತ್ತದೆ. ಒಂದನೆಯದು ಜಾಗೃತ ಮನಸ್ಸಿಗೆ ಬರಬೇಕಾದರೆ ಇನ್ನೊಂದರ ಮೂಲಕವೇ ಹಾದು ಬರಬೇಕು. ಹೀಗೆ ಬರುವಾಗ “ದಂಡ ದಾರಿ”ಯನ್ನೂ ಹಾಯಬೇಕು. ನಮ್ಮ ಜಾಗೃತ ಮನಸ್ಸಿಗೆ ಪಥ್ಯವಾಗದ ಆಲೋಚನೆಗಳನ್ನು ಈ ದಂಡ ದಾರಿ ತಡೆಹಿಡಿದು ಹಿಂದಕ್ಕೆ ಕಳುಹಿಸುತ್ತದೆ. ಈ ರೀತಿ ಹಿಂದಕ್ಕೆ ಹೋದ ಆಲೋಚನೆಗಳು ದಮನ ಸ್ಥಿತಿಯಲ್ಲಿರುತ್ತವೆ. ನಿದ್ರೆಯಲ್ಲಿ ದಂಡ ದಾರಿ ಸ್ವಲ್ಪ ಸಡಿಲವಾಗುತ್ತದೆ. ಆಗ ಈ ಆಲೋಚನೆಗಳು ಮೇಲೇರಿ ಬರುತ್ತವೆ. ಸಡಿಲವಾದರೂ ನಿಯಂತ್ರಣ ಇದ್ದೇ ಇರುವುದರಿಂದ ಆಲೋಚನೆಗಳು ರಾಜಿಮಾಡಿಕೊಂಡು ಬದಲಾದ ರೂಪದೊಂದಿಗೆ ಕನಸಾಗಿ ಕಾಣಿಸಿಕೊಳ್ಳುತ್ತವೆ.

ಕನಸು ಕೇವಲ ದೃಶ್ಯಗಳ ಸರಪಳಿಯಾಗಿರದೆ ಜೀವಂತ ಅನುಭವವಾಗಿದೆ. ಏಕೆಂದರೆ ತಕ್ಕ ಭಾವನೆಗಳ ಸಹಿತ ನಾವು ಅದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತೇವೆ. ಉದಾಹರಣೆಗೆ ದುಃಖದ ಕನಸು ಬಿದ್ದಾಗ ಬಿಕ್ಕಿಬಿಕ್ಕಿ ಅಳುತ್ತೇವೆ. ಆದರೆ ಶರೀರ ನಿಷ್ಕ್ರಿಯವಾಗಿರುತ್ತದೆ. ಕೈಕಾಲುಗಳು ಚಲಿಸಲಾಗುವ ದಿಲ್ಲ. ಹೃದಯದ ಬಡಿತ, ರಕ್ತದೊತ್ತಡ, ಉಸಿರಾಟಗಳು ಏರುಪೇರಾಗುತ್ತವೆ.

ಕನಸುಗಳು ನಮ್ಮ ಮನಸ್ಥಿತಿಯ ಕನ್ನಡಿ. ಮನಸ್ಸು ಸಮಾಧಾನ, ಸಂತೃಪ್ತಿಯಲ್ಲಿದ್ದಾಗ ಬೀಳುವ ಕನಸೇ ಬೇರೆ. ಗಾಬರಿ, ಭಯ, ದುಃಖದಿಂದ ಕೂಡಿರುವಾಗ ಬೀಳುವ ಕನಸೇ ಬೇರೆ.

ನಮಗೆ ಬೀಳುವ ಹೆಚ್ಚಿನ ಕನಸುಗಳು ವರ್ಣಮಯ. ಕೆಲವು ಸಲ ಕಪ್ಪು-ಬಿಳುಪು ಅಥವಾ ಬೂದುಬಣ್ಣದ ಕನಸುಗಳು ಬೀಳಬಹುದು.
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎನಗ್ಯಾಕೆ ಕಾವ್ಯದ ಹಂಗು ?
Next post ಅವ್ವ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys