Home / ಲೇಖನ / ವಿಜ್ಞಾನ / ಕನಸುಗಳು

ಕನಸುಗಳು

“ಕನಸು” ನಮ್ಮ ನಿದ್ರೆಯ ಅವಿಭಾಜ್ಯ ಅಂಗ. ಮಿದುಳಿನ ಹೈಪೋಥಲಮಸ್ ನಿದ್ರೆಯನ್ನು ನಿಯಂತ್ರಿಸುವ ಭಾಗ. ಹೀಗಾಗಿ ಕನಸು ಮೆದುಳಿನ ಚಟುವಟಿಕೆಯಾಗಿದೆ. ನಾವು ಒಂದು ಗಂಟೆ ನಿದ್ರೆ ಮಾಡಿದರೆ ಹತ್ತು ನಿಮಿಷ ಕನಸು ಕಾಣುತ್ತೇವೆ! ಅಂದರೆ ಪ್ರತಿರಾತ್ರಿ ನಾವು ಹತ್ತತ್ತು ನಿಮಿಷಗಳ ಕಾಲ ಐದಾರು ಸಲ ಕನಸು ಕಾಣುತ್ತೇವೆ. ಕನಸುಗಳನ್ನು ವೈಜ್ಞಾನಿಕವಾಗಿ ಅಭ್ಯಾಸ ಮಾಡಿದವರಲ್ಲಿ ಸಿಗ್ಮಂಡ್ ಫ್ರಾಯ್ಡ್ ಪ್ರಮುಖರು. ಇವರ ಪ್ರಕಾರ ನಮ್ಮ ಮನಸ್ಸಿನಲ್ಲಿ ಆಲೋಚನೆಗಳನ್ನು ಮಾಡುವ ಎರಡು ಪ್ರತಿನಿಧಿಗಳಿವೆ. ಒಂದು ಸುಪ್ತ ಮನಸ್ಸಿನಲ್ಲಿ ಇದ್ದರೆ ಇನ್ನೊಂದು ಜಾಗೃತ ಮನಸ್ಸಿನಲ್ಲಿರುತ್ತದೆ. ಒಂದನೆಯದು ಜಾಗೃತ ಮನಸ್ಸಿಗೆ ಬರಬೇಕಾದರೆ ಇನ್ನೊಂದರ ಮೂಲಕವೇ ಹಾದು ಬರಬೇಕು. ಹೀಗೆ ಬರುವಾಗ “ದಂಡ ದಾರಿ”ಯನ್ನೂ ಹಾಯಬೇಕು. ನಮ್ಮ ಜಾಗೃತ ಮನಸ್ಸಿಗೆ ಪಥ್ಯವಾಗದ ಆಲೋಚನೆಗಳನ್ನು ಈ ದಂಡ ದಾರಿ ತಡೆಹಿಡಿದು ಹಿಂದಕ್ಕೆ ಕಳುಹಿಸುತ್ತದೆ. ಈ ರೀತಿ ಹಿಂದಕ್ಕೆ ಹೋದ ಆಲೋಚನೆಗಳು ದಮನ ಸ್ಥಿತಿಯಲ್ಲಿರುತ್ತವೆ. ನಿದ್ರೆಯಲ್ಲಿ ದಂಡ ದಾರಿ ಸ್ವಲ್ಪ ಸಡಿಲವಾಗುತ್ತದೆ. ಆಗ ಈ ಆಲೋಚನೆಗಳು ಮೇಲೇರಿ ಬರುತ್ತವೆ. ಸಡಿಲವಾದರೂ ನಿಯಂತ್ರಣ ಇದ್ದೇ ಇರುವುದರಿಂದ ಆಲೋಚನೆಗಳು ರಾಜಿಮಾಡಿಕೊಂಡು ಬದಲಾದ ರೂಪದೊಂದಿಗೆ ಕನಸಾಗಿ ಕಾಣಿಸಿಕೊಳ್ಳುತ್ತವೆ.

ಕನಸು ಕೇವಲ ದೃಶ್ಯಗಳ ಸರಪಳಿಯಾಗಿರದೆ ಜೀವಂತ ಅನುಭವವಾಗಿದೆ. ಏಕೆಂದರೆ ತಕ್ಕ ಭಾವನೆಗಳ ಸಹಿತ ನಾವು ಅದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತೇವೆ. ಉದಾಹರಣೆಗೆ ದುಃಖದ ಕನಸು ಬಿದ್ದಾಗ ಬಿಕ್ಕಿಬಿಕ್ಕಿ ಅಳುತ್ತೇವೆ. ಆದರೆ ಶರೀರ ನಿಷ್ಕ್ರಿಯವಾಗಿರುತ್ತದೆ. ಕೈಕಾಲುಗಳು ಚಲಿಸಲಾಗುವ ದಿಲ್ಲ. ಹೃದಯದ ಬಡಿತ, ರಕ್ತದೊತ್ತಡ, ಉಸಿರಾಟಗಳು ಏರುಪೇರಾಗುತ್ತವೆ.

ಕನಸುಗಳು ನಮ್ಮ ಮನಸ್ಥಿತಿಯ ಕನ್ನಡಿ. ಮನಸ್ಸು ಸಮಾಧಾನ, ಸಂತೃಪ್ತಿಯಲ್ಲಿದ್ದಾಗ ಬೀಳುವ ಕನಸೇ ಬೇರೆ. ಗಾಬರಿ, ಭಯ, ದುಃಖದಿಂದ ಕೂಡಿರುವಾಗ ಬೀಳುವ ಕನಸೇ ಬೇರೆ.

ನಮಗೆ ಬೀಳುವ ಹೆಚ್ಚಿನ ಕನಸುಗಳು ವರ್ಣಮಯ. ಕೆಲವು ಸಲ ಕಪ್ಪು-ಬಿಳುಪು ಅಥವಾ ಬೂದುಬಣ್ಣದ ಕನಸುಗಳು ಬೀಳಬಹುದು.
*****

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...