Home / ಲೇಖನ / ವಿಜ್ಞಾನ / ಕನಸುಗಳು

ಕನಸುಗಳು

“ಕನಸು” ನಮ್ಮ ನಿದ್ರೆಯ ಅವಿಭಾಜ್ಯ ಅಂಗ. ಮಿದುಳಿನ ಹೈಪೋಥಲಮಸ್ ನಿದ್ರೆಯನ್ನು ನಿಯಂತ್ರಿಸುವ ಭಾಗ. ಹೀಗಾಗಿ ಕನಸು ಮೆದುಳಿನ ಚಟುವಟಿಕೆಯಾಗಿದೆ. ನಾವು ಒಂದು ಗಂಟೆ ನಿದ್ರೆ ಮಾಡಿದರೆ ಹತ್ತು ನಿಮಿಷ ಕನಸು ಕಾಣುತ್ತೇವೆ! ಅಂದರೆ ಪ್ರತಿರಾತ್ರಿ ನಾವು ಹತ್ತತ್ತು ನಿಮಿಷಗಳ ಕಾಲ ಐದಾರು ಸಲ ಕನಸು ಕಾಣುತ್ತೇವೆ. ಕನಸುಗಳನ್ನು ವೈಜ್ಞಾನಿಕವಾಗಿ ಅಭ್ಯಾಸ ಮಾಡಿದವರಲ್ಲಿ ಸಿಗ್ಮಂಡ್ ಫ್ರಾಯ್ಡ್ ಪ್ರಮುಖರು. ಇವರ ಪ್ರಕಾರ ನಮ್ಮ ಮನಸ್ಸಿನಲ್ಲಿ ಆಲೋಚನೆಗಳನ್ನು ಮಾಡುವ ಎರಡು ಪ್ರತಿನಿಧಿಗಳಿವೆ. ಒಂದು ಸುಪ್ತ ಮನಸ್ಸಿನಲ್ಲಿ ಇದ್ದರೆ ಇನ್ನೊಂದು ಜಾಗೃತ ಮನಸ್ಸಿನಲ್ಲಿರುತ್ತದೆ. ಒಂದನೆಯದು ಜಾಗೃತ ಮನಸ್ಸಿಗೆ ಬರಬೇಕಾದರೆ ಇನ್ನೊಂದರ ಮೂಲಕವೇ ಹಾದು ಬರಬೇಕು. ಹೀಗೆ ಬರುವಾಗ “ದಂಡ ದಾರಿ”ಯನ್ನೂ ಹಾಯಬೇಕು. ನಮ್ಮ ಜಾಗೃತ ಮನಸ್ಸಿಗೆ ಪಥ್ಯವಾಗದ ಆಲೋಚನೆಗಳನ್ನು ಈ ದಂಡ ದಾರಿ ತಡೆಹಿಡಿದು ಹಿಂದಕ್ಕೆ ಕಳುಹಿಸುತ್ತದೆ. ಈ ರೀತಿ ಹಿಂದಕ್ಕೆ ಹೋದ ಆಲೋಚನೆಗಳು ದಮನ ಸ್ಥಿತಿಯಲ್ಲಿರುತ್ತವೆ. ನಿದ್ರೆಯಲ್ಲಿ ದಂಡ ದಾರಿ ಸ್ವಲ್ಪ ಸಡಿಲವಾಗುತ್ತದೆ. ಆಗ ಈ ಆಲೋಚನೆಗಳು ಮೇಲೇರಿ ಬರುತ್ತವೆ. ಸಡಿಲವಾದರೂ ನಿಯಂತ್ರಣ ಇದ್ದೇ ಇರುವುದರಿಂದ ಆಲೋಚನೆಗಳು ರಾಜಿಮಾಡಿಕೊಂಡು ಬದಲಾದ ರೂಪದೊಂದಿಗೆ ಕನಸಾಗಿ ಕಾಣಿಸಿಕೊಳ್ಳುತ್ತವೆ.

ಕನಸು ಕೇವಲ ದೃಶ್ಯಗಳ ಸರಪಳಿಯಾಗಿರದೆ ಜೀವಂತ ಅನುಭವವಾಗಿದೆ. ಏಕೆಂದರೆ ತಕ್ಕ ಭಾವನೆಗಳ ಸಹಿತ ನಾವು ಅದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತೇವೆ. ಉದಾಹರಣೆಗೆ ದುಃಖದ ಕನಸು ಬಿದ್ದಾಗ ಬಿಕ್ಕಿಬಿಕ್ಕಿ ಅಳುತ್ತೇವೆ. ಆದರೆ ಶರೀರ ನಿಷ್ಕ್ರಿಯವಾಗಿರುತ್ತದೆ. ಕೈಕಾಲುಗಳು ಚಲಿಸಲಾಗುವ ದಿಲ್ಲ. ಹೃದಯದ ಬಡಿತ, ರಕ್ತದೊತ್ತಡ, ಉಸಿರಾಟಗಳು ಏರುಪೇರಾಗುತ್ತವೆ.

ಕನಸುಗಳು ನಮ್ಮ ಮನಸ್ಥಿತಿಯ ಕನ್ನಡಿ. ಮನಸ್ಸು ಸಮಾಧಾನ, ಸಂತೃಪ್ತಿಯಲ್ಲಿದ್ದಾಗ ಬೀಳುವ ಕನಸೇ ಬೇರೆ. ಗಾಬರಿ, ಭಯ, ದುಃಖದಿಂದ ಕೂಡಿರುವಾಗ ಬೀಳುವ ಕನಸೇ ಬೇರೆ.

ನಮಗೆ ಬೀಳುವ ಹೆಚ್ಚಿನ ಕನಸುಗಳು ವರ್ಣಮಯ. ಕೆಲವು ಸಲ ಕಪ್ಪು-ಬಿಳುಪು ಅಥವಾ ಬೂದುಬಣ್ಣದ ಕನಸುಗಳು ಬೀಳಬಹುದು.
*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...