ಲಿಂಗಮ್ಮನ ವಚನಗಳು – ೨೮

ಏನೇನು ಇಲ್ಲದಾಗ ನೀವಿಲ್ಲದಿದ್ದರೆ,
ನಾನಾಗಬಲ್ಲೆನೇ ಅಯ್ಯ?
ಆದಿಅನಾದಿ ಇಲ್ಲದಂದು ನೀವಿಲ್ಲದಿದ್ದರೆ,
ನಾನಾಗಬಲ್ಲೆನೇ ಅಯ್ಯ?
ಮುಳುಗಿ ಹೋದವರ ತೆಗೆದುಕೊಂಡು ನಿಮ್ಮ
ತೊತ್ತಿನ ತೊತ್ತಿನ ಪಡಿದೊತ್ತಿನ ಮಗಳೆಂದು,
ರಕ್ಷಣೆಯ ಮಾಡಿದ ಶಿಸುವಾದ ಕಾರಣ
ಹಡಪದಪ್ಪಣ್ಣನೆ ಎನ್ನ ಕರಸ್ಥಲಕ್ಕೆ
ಲಿಂಗವಾಗಿ ಬಂದು ನೆಲೆಗೊಂಡರು.
ಚನ್ನಮಲ್ಲೇಶ್ವರನೆ ಎನ್ನ ಮನಸ್ಥಲಕೆ
ಪ್ರಾಣವಾಗಿ ಮೂರ್ತಗೊಂಡರು
ಆ ಕರಸ್ಥಲದ ಲಿಂಗವನರ್ಚಿಸಿ ಪೂಜಿಸಿ,
ವರವ ಬೇಡಿದರೆ, ತನುವ ತೋರಿದರು.
ಆ ತನುವಿಡಿದು ಮಹಾಘನವ ಕಂಡೆ.
ಆ ಘನವಿಡಿದು ಮನವ ನಿಲಿಸಿದೆ.
ಮನವ ನಿಲಿಸಿ ನೋಡುವನ್ನಕ್ಕ
ಪ್ರಾಣದ ನೆಲೆಯನರಿದೆ.  ಪ್ರಾಣವನೊಂದುಗೂಡಿದೆ.
ಕಾಣಬಾರದ ಕದಳಿಯನೆ ಹೊಕ್ಕು
ನೂನ ಕದಳಿಯ ದಾಂಟಿದೆ.
ಜ್ಞಾನಜ್ಯೋತಿಯ ಕಂಡೆ.
ತಾನುತಾನಾಗಿಪ್ಪ, ಮಹಾಬೆಳೆಗಿನಲ್ಲಿ
ಓಲಾಡಿ ಸುಖಿಯಾದೆನಯ್ಯ
ಚನ್ನಬಸವಣ್ಣನ ಕರುಣದ ಶಿಸುವಾದ ಕಾರಣದಿಂದ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಧಿಕಾರ
Next post ಜಾರಿಹೋದ ಉಂಗುರಕೆ

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

cheap jordans|wholesale air max|wholesale jordans|wholesale jewelry|wholesale jerseys