Home / ಲೇಖನ / ಇತರೆ / ಮೌನದೊಳಗೆ

ಮೌನದೊಳಗೆ

ಪ್ರಿಯ ಸಖಿ,

ಇದು ಮಾತಿನ ಪ್ರಪಂಚ. ಇಡೀ ವಿಶ್ವವೇ ಶಬ್ದಮಯ. ಪದಗಳನ್ನು ಸೃಷ್ಟಿಸಿ, ಭಾಷೆಯನ್ನು ರೂಢಿಸಿ, ಮಾತನಾಡಲು ಕಲಿತ ಕ್ಷಣದಿಂದ ಮನುಷ್ಯನ ಜೀವನ ಶೈಲಿಯೇ ಬದಲಾಗಿ ಹೋಯಿತೆನ್ನುತ್ತದೆ ಇತಿಹಾಸ. ಅವನ ಎಲ್ಲ ಕ್ರಿಯೆಗಳಿಗೂ ಮಾತೇ ಮೂಲಮಂತ್ರವಾಗಿ ಹೋಯಿತು. ಇಂದು ಮಾತಿಲ್ಲದ ಪ್ರಪಂಚವನ್ನೊಮ್ಮೆ ಕಲ್ಪಿಸಿಕೊಂಡರೇ ಭಯವಾಗುತ್ತದೆ. ಮಾತು ಸಂವಹನದ ಅತ್ಯುತ್ತಮ ಮಾಧ್ಯಮವೂ ಹೌದು. ಆದರೆ ಮಾತು ಸೃಷ್ಟಿಸಿರುವ ಅನರ್ಥಗಳು ಆದ ಅಪಾರ್ಥಗಳನ್ನು ಲೆಕ್ಕಿಸುತ್ತಾ ಕುಳಿತರೇ ಅದೇ ಒಂದು ದೊಡ್ಡ ಪುರಾಣವಾಗಬಹುದು.

ಮಹಾಮಾತಿನ ಮನೆಯಾಗಿರುವ ಈ ಪ್ರಪಂಚದಲ್ಲಿ ಮೌನಕ್ಕೆ ಎಲ್ಲಿ ಬೆಲೆ ? ಎಲ್ಲಿ ನೆಲೆ ? ಎಂದು ಕ್ಷಣ ಹೊತ್ತು ಯೋಚಿಸಿದರೆ, ಮಾತಿಗಿಂತ ಮೌನದಿಂದಲೇ ಈ ಜಗತ್ತಿಗೆ ಆಗಿರುವ ಅನುಕೂಲಗಳು ಅಪರಿಮಿತ ಎಂದು ಗೋಚರಿಸುತ್ತಾ ಹೋಗುತ್ತದೆ. ಯೋಚಿಸಲು ಸಾಧ್ಯವಿರುವುದು, ವಿವೇಚಿಸಲು ಸಾಧ್ಯವಿರುವುದು, ಹೊಸತನ್ನ ಸೃಷ್ಟಿಸಲು ಸಾಧ್ಯವಿರುವುದು, ಉಪಕರಣಗಳು ಸೃಷ್ಟಿಯಾಗಿರುವುದು, ಕಥೆ, ಕಾವ್ಯ ಹುಟ್ಟುವುದು, ನಮನ್ನು ನಾವು ಅರಿತುಕೊಳ್ಳುವುದು, ಸಂಬಂಧಗಳನ್ನು ವಿಶ್ಲೇಷಿಸುವುದು ತನ್ನ ಹಾಗೂ ಇತರರ ಮುಖವಾಡಗಳನ್ನು ಅರ್ಥೈಸಲು ಸಾಧ್ಯವಿರುವುದು, ತಪ್ಪುಗಳಿಗೆ ಪಶ್ಚಾತ್ತಾಪ ಪಡುವುದು, ಆಂತರಿಕವಾಗಿ ಬೆಳೆಯುವುದು, ಭಾವನೆಗಳು ಮಥಿಸಿ ಮಥಿಸಿ ಗಟ್ಟಿ ಮಾತಾಗಲು ಸಿದ್ಧತೆ ನಡೆವುದು… ಇನ್ನೂ ಎಷ್ಟೆಷ್ಟೋ ಪಟ್ಟಿ ಮುಗಿಯುವುದೇ ಇಲ್ಲ. ಎಲ್ಲಾ ಸಾಧ್ಯವಾಗಿರುವುದು ಮೌನದಿಂದಲೇ ಮನುಷ್ಯನಿಗೆ ಮಾತು ಎಷ್ಟು ಮುಖ್ಯವೋ ಮೌನವೂ ಅಷ್ಟೇ ಮುಖ್ಯ. ಮಾತಿನಿಂದ ಸಾಧಿಸಲಾಗದ ಎಷ್ಟೊಂದನ್ನು ಮೌನದಿಂದ ಸಾಧಿಸಲು ಸಾಧ್ಯವಿರುವುದೇ ಮೌನದ ಮಹತ್ತಿಗೆ ಕಾರಣವಾಗಿದೆ. ಮೌನವೆಂಬುದು ಒಂದು ರೀತಿಯ ತಪಸ್ಸು. ಸದಾ ಚಂಚಲವಾಗಿರುವ ಮನಸ್ಸನ್ನು ಹಿಡಿದಿರಿಸಿ ನಮಗೆ ಬೇಕೆನಿಸುವ ಒಂದು ವಿಷಯದ ಕುರಿತು ಕೇಂದ್ರೀಕರಿಸಿ, ಹೊರಗೆ ಮೌನವಾಗಿದ್ದರೂ ಒಳಗೇ ಚಿಂತನ ಮಂಥನ ನಡೆಸುವ ಕ್ರಿಯೆಯಿಂದ ಅನೇಕ ಸೃಜನಶೀಲ ಸೃಷ್ಟಿಗಳು ಮೂಡಬಹುದು. ಆದರೆ ಇದಕ್ಕೂ ಮಿಗಿಲಾದುದು ಒಳಗಣ ಮೌನ ಆ ಹೊರಗೂ ಮೌನವಾಗುಳಿದು, ತನ್ನ ಮನಸ್ಸಿನೊಂದಿಗೂ ಮೌನವಾಗುಳಿದ ಮೌನದ ಆ ಅಲೌಕಿಕ ಹಂತವನ್ನು ಕೆಲ ಕ್ಷಣಗಳಾದರೂ ಕಂಡುಕೊಂಡವ ನಿಜವಾದ ಋಷಿ ಎನ್ನುತ್ತಾರೆ ನಮ್ಮ ದಾರ್ಶನಿಕರು. ಈ ಹಂತವನ್ನು ತಲುಪುವುದು ಎಲ್ಲರಿಗೂ ಸುಲಭ ಸಾಧ್ಯವಲ್ಲ. ಮೌನದ ಬೆಲೆಯನ್ನು ಅರಿತವನು ಮಾತಿಗಿಂತ ಹೆಚ್ಚು ಮೌನವನ್ನು ಪ್ರೀತಿಸಲಾರಂಭಿಸುತ್ತಾನೆ. ಮೌನದಲ್ಲಿಯೇ ಹೊಸತನ್ನು ಹುಡುಕಲಾರಂಭಿಸುತ್ತಾನೆ. ಮೌನದಲ್ಲಿಯೇ ಇತರರೊಂದಿಗೆ ಸಂವಹನ ನಡೆಸಲು ಪ್ರಯತ್ನಿಸುತ್ತಾನೆ. ಮಾತಿಗಿರುವ ಶಕ್ತಿಗಿಂತ ನೂರು ಪಟ್ಟು ಶಕ್ತಿ ಮೌನಕ್ಕಿರುವುದನ್ನು ಕಂಡುಕೊಳ್ಳುವವನೇ ನಿಜವಾದ ಸುಖಿ ಎಂದು ನಮ್ಮ ಹಿರಿಯರು ಹೇಳಿದ ಮಾತು ಅರ್ಥಹೀನವಾದುದೆಂದು ನಂಬುವವರಿಗೆ ತಿಳುವಳಿಕೆ ನೀಡಲು ಹೋಗುವುದಕ್ಕಿಂತ ಮೌನವಾಗಿರುವುದೇ ಜಾಣತನವಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...