Home / ಲೇಖನ / ಇತರೆ / ಮೌನದೊಳಗೆ

ಮೌನದೊಳಗೆ

ಪ್ರಿಯ ಸಖಿ,

ಇದು ಮಾತಿನ ಪ್ರಪಂಚ. ಇಡೀ ವಿಶ್ವವೇ ಶಬ್ದಮಯ. ಪದಗಳನ್ನು ಸೃಷ್ಟಿಸಿ, ಭಾಷೆಯನ್ನು ರೂಢಿಸಿ, ಮಾತನಾಡಲು ಕಲಿತ ಕ್ಷಣದಿಂದ ಮನುಷ್ಯನ ಜೀವನ ಶೈಲಿಯೇ ಬದಲಾಗಿ ಹೋಯಿತೆನ್ನುತ್ತದೆ ಇತಿಹಾಸ. ಅವನ ಎಲ್ಲ ಕ್ರಿಯೆಗಳಿಗೂ ಮಾತೇ ಮೂಲಮಂತ್ರವಾಗಿ ಹೋಯಿತು. ಇಂದು ಮಾತಿಲ್ಲದ ಪ್ರಪಂಚವನ್ನೊಮ್ಮೆ ಕಲ್ಪಿಸಿಕೊಂಡರೇ ಭಯವಾಗುತ್ತದೆ. ಮಾತು ಸಂವಹನದ ಅತ್ಯುತ್ತಮ ಮಾಧ್ಯಮವೂ ಹೌದು. ಆದರೆ ಮಾತು ಸೃಷ್ಟಿಸಿರುವ ಅನರ್ಥಗಳು ಆದ ಅಪಾರ್ಥಗಳನ್ನು ಲೆಕ್ಕಿಸುತ್ತಾ ಕುಳಿತರೇ ಅದೇ ಒಂದು ದೊಡ್ಡ ಪುರಾಣವಾಗಬಹುದು.

ಮಹಾಮಾತಿನ ಮನೆಯಾಗಿರುವ ಈ ಪ್ರಪಂಚದಲ್ಲಿ ಮೌನಕ್ಕೆ ಎಲ್ಲಿ ಬೆಲೆ ? ಎಲ್ಲಿ ನೆಲೆ ? ಎಂದು ಕ್ಷಣ ಹೊತ್ತು ಯೋಚಿಸಿದರೆ, ಮಾತಿಗಿಂತ ಮೌನದಿಂದಲೇ ಈ ಜಗತ್ತಿಗೆ ಆಗಿರುವ ಅನುಕೂಲಗಳು ಅಪರಿಮಿತ ಎಂದು ಗೋಚರಿಸುತ್ತಾ ಹೋಗುತ್ತದೆ. ಯೋಚಿಸಲು ಸಾಧ್ಯವಿರುವುದು, ವಿವೇಚಿಸಲು ಸಾಧ್ಯವಿರುವುದು, ಹೊಸತನ್ನ ಸೃಷ್ಟಿಸಲು ಸಾಧ್ಯವಿರುವುದು, ಉಪಕರಣಗಳು ಸೃಷ್ಟಿಯಾಗಿರುವುದು, ಕಥೆ, ಕಾವ್ಯ ಹುಟ್ಟುವುದು, ನಮನ್ನು ನಾವು ಅರಿತುಕೊಳ್ಳುವುದು, ಸಂಬಂಧಗಳನ್ನು ವಿಶ್ಲೇಷಿಸುವುದು ತನ್ನ ಹಾಗೂ ಇತರರ ಮುಖವಾಡಗಳನ್ನು ಅರ್ಥೈಸಲು ಸಾಧ್ಯವಿರುವುದು, ತಪ್ಪುಗಳಿಗೆ ಪಶ್ಚಾತ್ತಾಪ ಪಡುವುದು, ಆಂತರಿಕವಾಗಿ ಬೆಳೆಯುವುದು, ಭಾವನೆಗಳು ಮಥಿಸಿ ಮಥಿಸಿ ಗಟ್ಟಿ ಮಾತಾಗಲು ಸಿದ್ಧತೆ ನಡೆವುದು… ಇನ್ನೂ ಎಷ್ಟೆಷ್ಟೋ ಪಟ್ಟಿ ಮುಗಿಯುವುದೇ ಇಲ್ಲ. ಎಲ್ಲಾ ಸಾಧ್ಯವಾಗಿರುವುದು ಮೌನದಿಂದಲೇ ಮನುಷ್ಯನಿಗೆ ಮಾತು ಎಷ್ಟು ಮುಖ್ಯವೋ ಮೌನವೂ ಅಷ್ಟೇ ಮುಖ್ಯ. ಮಾತಿನಿಂದ ಸಾಧಿಸಲಾಗದ ಎಷ್ಟೊಂದನ್ನು ಮೌನದಿಂದ ಸಾಧಿಸಲು ಸಾಧ್ಯವಿರುವುದೇ ಮೌನದ ಮಹತ್ತಿಗೆ ಕಾರಣವಾಗಿದೆ. ಮೌನವೆಂಬುದು ಒಂದು ರೀತಿಯ ತಪಸ್ಸು. ಸದಾ ಚಂಚಲವಾಗಿರುವ ಮನಸ್ಸನ್ನು ಹಿಡಿದಿರಿಸಿ ನಮಗೆ ಬೇಕೆನಿಸುವ ಒಂದು ವಿಷಯದ ಕುರಿತು ಕೇಂದ್ರೀಕರಿಸಿ, ಹೊರಗೆ ಮೌನವಾಗಿದ್ದರೂ ಒಳಗೇ ಚಿಂತನ ಮಂಥನ ನಡೆಸುವ ಕ್ರಿಯೆಯಿಂದ ಅನೇಕ ಸೃಜನಶೀಲ ಸೃಷ್ಟಿಗಳು ಮೂಡಬಹುದು. ಆದರೆ ಇದಕ್ಕೂ ಮಿಗಿಲಾದುದು ಒಳಗಣ ಮೌನ ಆ ಹೊರಗೂ ಮೌನವಾಗುಳಿದು, ತನ್ನ ಮನಸ್ಸಿನೊಂದಿಗೂ ಮೌನವಾಗುಳಿದ ಮೌನದ ಆ ಅಲೌಕಿಕ ಹಂತವನ್ನು ಕೆಲ ಕ್ಷಣಗಳಾದರೂ ಕಂಡುಕೊಂಡವ ನಿಜವಾದ ಋಷಿ ಎನ್ನುತ್ತಾರೆ ನಮ್ಮ ದಾರ್ಶನಿಕರು. ಈ ಹಂತವನ್ನು ತಲುಪುವುದು ಎಲ್ಲರಿಗೂ ಸುಲಭ ಸಾಧ್ಯವಲ್ಲ. ಮೌನದ ಬೆಲೆಯನ್ನು ಅರಿತವನು ಮಾತಿಗಿಂತ ಹೆಚ್ಚು ಮೌನವನ್ನು ಪ್ರೀತಿಸಲಾರಂಭಿಸುತ್ತಾನೆ. ಮೌನದಲ್ಲಿಯೇ ಹೊಸತನ್ನು ಹುಡುಕಲಾರಂಭಿಸುತ್ತಾನೆ. ಮೌನದಲ್ಲಿಯೇ ಇತರರೊಂದಿಗೆ ಸಂವಹನ ನಡೆಸಲು ಪ್ರಯತ್ನಿಸುತ್ತಾನೆ. ಮಾತಿಗಿರುವ ಶಕ್ತಿಗಿಂತ ನೂರು ಪಟ್ಟು ಶಕ್ತಿ ಮೌನಕ್ಕಿರುವುದನ್ನು ಕಂಡುಕೊಳ್ಳುವವನೇ ನಿಜವಾದ ಸುಖಿ ಎಂದು ನಮ್ಮ ಹಿರಿಯರು ಹೇಳಿದ ಮಾತು ಅರ್ಥಹೀನವಾದುದೆಂದು ನಂಬುವವರಿಗೆ ತಿಳುವಳಿಕೆ ನೀಡಲು ಹೋಗುವುದಕ್ಕಿಂತ ಮೌನವಾಗಿರುವುದೇ ಜಾಣತನವಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...