Home / ಲೇಖನ / ಇತರೆ / ಮೌನದೊಳಗೆ

ಮೌನದೊಳಗೆ

ಪ್ರಿಯ ಸಖಿ,

ಇದು ಮಾತಿನ ಪ್ರಪಂಚ. ಇಡೀ ವಿಶ್ವವೇ ಶಬ್ದಮಯ. ಪದಗಳನ್ನು ಸೃಷ್ಟಿಸಿ, ಭಾಷೆಯನ್ನು ರೂಢಿಸಿ, ಮಾತನಾಡಲು ಕಲಿತ ಕ್ಷಣದಿಂದ ಮನುಷ್ಯನ ಜೀವನ ಶೈಲಿಯೇ ಬದಲಾಗಿ ಹೋಯಿತೆನ್ನುತ್ತದೆ ಇತಿಹಾಸ. ಅವನ ಎಲ್ಲ ಕ್ರಿಯೆಗಳಿಗೂ ಮಾತೇ ಮೂಲಮಂತ್ರವಾಗಿ ಹೋಯಿತು. ಇಂದು ಮಾತಿಲ್ಲದ ಪ್ರಪಂಚವನ್ನೊಮ್ಮೆ ಕಲ್ಪಿಸಿಕೊಂಡರೇ ಭಯವಾಗುತ್ತದೆ. ಮಾತು ಸಂವಹನದ ಅತ್ಯುತ್ತಮ ಮಾಧ್ಯಮವೂ ಹೌದು. ಆದರೆ ಮಾತು ಸೃಷ್ಟಿಸಿರುವ ಅನರ್ಥಗಳು ಆದ ಅಪಾರ್ಥಗಳನ್ನು ಲೆಕ್ಕಿಸುತ್ತಾ ಕುಳಿತರೇ ಅದೇ ಒಂದು ದೊಡ್ಡ ಪುರಾಣವಾಗಬಹುದು.

ಮಹಾಮಾತಿನ ಮನೆಯಾಗಿರುವ ಈ ಪ್ರಪಂಚದಲ್ಲಿ ಮೌನಕ್ಕೆ ಎಲ್ಲಿ ಬೆಲೆ ? ಎಲ್ಲಿ ನೆಲೆ ? ಎಂದು ಕ್ಷಣ ಹೊತ್ತು ಯೋಚಿಸಿದರೆ, ಮಾತಿಗಿಂತ ಮೌನದಿಂದಲೇ ಈ ಜಗತ್ತಿಗೆ ಆಗಿರುವ ಅನುಕೂಲಗಳು ಅಪರಿಮಿತ ಎಂದು ಗೋಚರಿಸುತ್ತಾ ಹೋಗುತ್ತದೆ. ಯೋಚಿಸಲು ಸಾಧ್ಯವಿರುವುದು, ವಿವೇಚಿಸಲು ಸಾಧ್ಯವಿರುವುದು, ಹೊಸತನ್ನ ಸೃಷ್ಟಿಸಲು ಸಾಧ್ಯವಿರುವುದು, ಉಪಕರಣಗಳು ಸೃಷ್ಟಿಯಾಗಿರುವುದು, ಕಥೆ, ಕಾವ್ಯ ಹುಟ್ಟುವುದು, ನಮನ್ನು ನಾವು ಅರಿತುಕೊಳ್ಳುವುದು, ಸಂಬಂಧಗಳನ್ನು ವಿಶ್ಲೇಷಿಸುವುದು ತನ್ನ ಹಾಗೂ ಇತರರ ಮುಖವಾಡಗಳನ್ನು ಅರ್ಥೈಸಲು ಸಾಧ್ಯವಿರುವುದು, ತಪ್ಪುಗಳಿಗೆ ಪಶ್ಚಾತ್ತಾಪ ಪಡುವುದು, ಆಂತರಿಕವಾಗಿ ಬೆಳೆಯುವುದು, ಭಾವನೆಗಳು ಮಥಿಸಿ ಮಥಿಸಿ ಗಟ್ಟಿ ಮಾತಾಗಲು ಸಿದ್ಧತೆ ನಡೆವುದು… ಇನ್ನೂ ಎಷ್ಟೆಷ್ಟೋ ಪಟ್ಟಿ ಮುಗಿಯುವುದೇ ಇಲ್ಲ. ಎಲ್ಲಾ ಸಾಧ್ಯವಾಗಿರುವುದು ಮೌನದಿಂದಲೇ ಮನುಷ್ಯನಿಗೆ ಮಾತು ಎಷ್ಟು ಮುಖ್ಯವೋ ಮೌನವೂ ಅಷ್ಟೇ ಮುಖ್ಯ. ಮಾತಿನಿಂದ ಸಾಧಿಸಲಾಗದ ಎಷ್ಟೊಂದನ್ನು ಮೌನದಿಂದ ಸಾಧಿಸಲು ಸಾಧ್ಯವಿರುವುದೇ ಮೌನದ ಮಹತ್ತಿಗೆ ಕಾರಣವಾಗಿದೆ. ಮೌನವೆಂಬುದು ಒಂದು ರೀತಿಯ ತಪಸ್ಸು. ಸದಾ ಚಂಚಲವಾಗಿರುವ ಮನಸ್ಸನ್ನು ಹಿಡಿದಿರಿಸಿ ನಮಗೆ ಬೇಕೆನಿಸುವ ಒಂದು ವಿಷಯದ ಕುರಿತು ಕೇಂದ್ರೀಕರಿಸಿ, ಹೊರಗೆ ಮೌನವಾಗಿದ್ದರೂ ಒಳಗೇ ಚಿಂತನ ಮಂಥನ ನಡೆಸುವ ಕ್ರಿಯೆಯಿಂದ ಅನೇಕ ಸೃಜನಶೀಲ ಸೃಷ್ಟಿಗಳು ಮೂಡಬಹುದು. ಆದರೆ ಇದಕ್ಕೂ ಮಿಗಿಲಾದುದು ಒಳಗಣ ಮೌನ ಆ ಹೊರಗೂ ಮೌನವಾಗುಳಿದು, ತನ್ನ ಮನಸ್ಸಿನೊಂದಿಗೂ ಮೌನವಾಗುಳಿದ ಮೌನದ ಆ ಅಲೌಕಿಕ ಹಂತವನ್ನು ಕೆಲ ಕ್ಷಣಗಳಾದರೂ ಕಂಡುಕೊಂಡವ ನಿಜವಾದ ಋಷಿ ಎನ್ನುತ್ತಾರೆ ನಮ್ಮ ದಾರ್ಶನಿಕರು. ಈ ಹಂತವನ್ನು ತಲುಪುವುದು ಎಲ್ಲರಿಗೂ ಸುಲಭ ಸಾಧ್ಯವಲ್ಲ. ಮೌನದ ಬೆಲೆಯನ್ನು ಅರಿತವನು ಮಾತಿಗಿಂತ ಹೆಚ್ಚು ಮೌನವನ್ನು ಪ್ರೀತಿಸಲಾರಂಭಿಸುತ್ತಾನೆ. ಮೌನದಲ್ಲಿಯೇ ಹೊಸತನ್ನು ಹುಡುಕಲಾರಂಭಿಸುತ್ತಾನೆ. ಮೌನದಲ್ಲಿಯೇ ಇತರರೊಂದಿಗೆ ಸಂವಹನ ನಡೆಸಲು ಪ್ರಯತ್ನಿಸುತ್ತಾನೆ. ಮಾತಿಗಿರುವ ಶಕ್ತಿಗಿಂತ ನೂರು ಪಟ್ಟು ಶಕ್ತಿ ಮೌನಕ್ಕಿರುವುದನ್ನು ಕಂಡುಕೊಳ್ಳುವವನೇ ನಿಜವಾದ ಸುಖಿ ಎಂದು ನಮ್ಮ ಹಿರಿಯರು ಹೇಳಿದ ಮಾತು ಅರ್ಥಹೀನವಾದುದೆಂದು ನಂಬುವವರಿಗೆ ತಿಳುವಳಿಕೆ ನೀಡಲು ಹೋಗುವುದಕ್ಕಿಂತ ಮೌನವಾಗಿರುವುದೇ ಜಾಣತನವಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...