Home / ಕವನ / ಕವಿತೆ / ಬಸವ ಶರಣವರೇಣ್ಯ

ಬಸವ ಶರಣವರೇಣ್ಯ

ಬಸವ ನಾಮ ಸ್ಮರಣೆಯೆ ಪುಣ್ಯ
ಬಸವನ ನೆನೆಯುವ ಜನುಮವೆ ಧನ್ಯ || ಪ ||
ಬಸವೇಶ್ಚರ ಬಸವಣ್ಣನೆ ಮಾನ್ಯ
ಗುರುಬಸವೇಶನೆ ಶರಣವರೇಣ್ಯ || ಅ.ಪ.||

ಎಲ್ಲ ಧರ್ಮಗಳ ಸಾರವ ಹೀರುತ
ವೀರಶೈವವನು ರೂಪಿಸಿದೆ
ಜ್ಞಾನ ಭಕ್ತಿ ವೈರಾಗ್ಯ ಕರ್ಮಗಳ
ಸಮಗ್ರ ಧರ್ಮವ ತೋರಿಸಿದೆ || ೧ ||

ಅಂತರಂಗ ಶಿವಧ್ಯಾನವು ತುಂಬಿ
ಬಹಿರಂಗದಿ ಜಗಕಲ್ಯಾಣ
ಇಹಪರ ಎರಡರ ಸೇತುವೆ ಜೋಡಿಸಿ
ಮಾನವ ಜನ್ಮಕೆ ಸನ್ಮಾನ || ೨ ||

ಸಕಲ ಜೀವರಿಗೆ ಲೇಸನ್ನೆಣಿಸಿದೆ
ದೀನ ದಲಿತರಿಗೆ ಮಾನ್ಯತೆಯು
ಗಂಡು ಹೆಣ್ಣುಗಳ ಜಾತಿ ಭೇದಗಳ
ಅಳಿಸಿದೆ ಸಮತೆಯ ಸಾಧನೆಯು || ೩ ||

ಲೌಕಿಕ ಸಂಪದ ಭೋಗ ಭಾಗ್ಯಗಳ
ಶಿವನ ಪ್ರಸಾದವು ಎನ್ನುತ ತಿಳಿದೆ
ಸಮಾಜ ಸೇವೆಗೆ ಎಲ್ಲವು ಮೀಸಲು
ಎನ್ನುತ ಸ್ವಾರ್ಥದ ಬೇರನು ಅಳಿದೆ || ೪ ||

ದುಡಿಯದೆ ಏನೂ ಸಾಗದು ಜಗದಲಿ
ದುಡಿಯದೆ ತಿನ್ನಲು ಅದು ದ್ರೋಹ
ದುಡಿಯುವ ಕಾಯಕ ತತ್ವವ ತೋರಿದೆ
ದುಡಿಮೆಯೆ ಶರಣರ ನಿಜದಾಹ || ೫ ||

ಸತ್ಯದಾಚರಣೆಯು ನಿತ್ಯ ಕಾಯಕವು
ಶಿವನಿಗಿಷ್ಟವೆಂದೆ
ಸರಳ ಸನ್ನಡತೆ ಶಿವನ ಅನುಭಾವ
ಸಾರ್ಥಕವು ಬದುಕಿಗೆಂದೆ || ೬ ||

ಹೇಗೆ ನುಡಿಯುವುದು ಹೇಗೆ ನಡೆಯುವುದು
ಎಂಬ ರೀತಿಗಳ ಜನರಿಗೆ ಕಲಿಸಿದೆ
ನುಡಿದಂತೆ ನಡೆವ ಧೈರ್ಯ ಶ್ರದ್ಧೆಗಳ
ತುಂಬಿದೆ ಕೈಲಾಸವನ್ನಿಲ್ಲಿಳಿಸಿದೆ || ೭ ||

ಸುಳ್ಳು ಕಳವು ಕೊಲೆ ಕೋಪ ಹೇವರಿಕೆ
ಹೊಗಳು ತೆಗಳುಗಳು ಪಾಪ
ನೀತಿ ಸೂತ್ರಗಳ ಜನಕೆ ನೀಡಿದೆಯೊ
ಇದುವೆ ಧರ್ಮ ಕಲಾಪ || ೮ ||
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...