Home / ಕವನ / ಕವಿತೆ / ಬಸವ ಶರಣವರೇಣ್ಯ

ಬಸವ ಶರಣವರೇಣ್ಯ

ಬಸವ ನಾಮ ಸ್ಮರಣೆಯೆ ಪುಣ್ಯ
ಬಸವನ ನೆನೆಯುವ ಜನುಮವೆ ಧನ್ಯ || ಪ ||
ಬಸವೇಶ್ಚರ ಬಸವಣ್ಣನೆ ಮಾನ್ಯ
ಗುರುಬಸವೇಶನೆ ಶರಣವರೇಣ್ಯ || ಅ.ಪ.||

ಎಲ್ಲ ಧರ್ಮಗಳ ಸಾರವ ಹೀರುತ
ವೀರಶೈವವನು ರೂಪಿಸಿದೆ
ಜ್ಞಾನ ಭಕ್ತಿ ವೈರಾಗ್ಯ ಕರ್ಮಗಳ
ಸಮಗ್ರ ಧರ್ಮವ ತೋರಿಸಿದೆ || ೧ ||

ಅಂತರಂಗ ಶಿವಧ್ಯಾನವು ತುಂಬಿ
ಬಹಿರಂಗದಿ ಜಗಕಲ್ಯಾಣ
ಇಹಪರ ಎರಡರ ಸೇತುವೆ ಜೋಡಿಸಿ
ಮಾನವ ಜನ್ಮಕೆ ಸನ್ಮಾನ || ೨ ||

ಸಕಲ ಜೀವರಿಗೆ ಲೇಸನ್ನೆಣಿಸಿದೆ
ದೀನ ದಲಿತರಿಗೆ ಮಾನ್ಯತೆಯು
ಗಂಡು ಹೆಣ್ಣುಗಳ ಜಾತಿ ಭೇದಗಳ
ಅಳಿಸಿದೆ ಸಮತೆಯ ಸಾಧನೆಯು || ೩ ||

ಲೌಕಿಕ ಸಂಪದ ಭೋಗ ಭಾಗ್ಯಗಳ
ಶಿವನ ಪ್ರಸಾದವು ಎನ್ನುತ ತಿಳಿದೆ
ಸಮಾಜ ಸೇವೆಗೆ ಎಲ್ಲವು ಮೀಸಲು
ಎನ್ನುತ ಸ್ವಾರ್ಥದ ಬೇರನು ಅಳಿದೆ || ೪ ||

ದುಡಿಯದೆ ಏನೂ ಸಾಗದು ಜಗದಲಿ
ದುಡಿಯದೆ ತಿನ್ನಲು ಅದು ದ್ರೋಹ
ದುಡಿಯುವ ಕಾಯಕ ತತ್ವವ ತೋರಿದೆ
ದುಡಿಮೆಯೆ ಶರಣರ ನಿಜದಾಹ || ೫ ||

ಸತ್ಯದಾಚರಣೆಯು ನಿತ್ಯ ಕಾಯಕವು
ಶಿವನಿಗಿಷ್ಟವೆಂದೆ
ಸರಳ ಸನ್ನಡತೆ ಶಿವನ ಅನುಭಾವ
ಸಾರ್ಥಕವು ಬದುಕಿಗೆಂದೆ || ೬ ||

ಹೇಗೆ ನುಡಿಯುವುದು ಹೇಗೆ ನಡೆಯುವುದು
ಎಂಬ ರೀತಿಗಳ ಜನರಿಗೆ ಕಲಿಸಿದೆ
ನುಡಿದಂತೆ ನಡೆವ ಧೈರ್ಯ ಶ್ರದ್ಧೆಗಳ
ತುಂಬಿದೆ ಕೈಲಾಸವನ್ನಿಲ್ಲಿಳಿಸಿದೆ || ೭ ||

ಸುಳ್ಳು ಕಳವು ಕೊಲೆ ಕೋಪ ಹೇವರಿಕೆ
ಹೊಗಳು ತೆಗಳುಗಳು ಪಾಪ
ನೀತಿ ಸೂತ್ರಗಳ ಜನಕೆ ನೀಡಿದೆಯೊ
ಇದುವೆ ಧರ್ಮ ಕಲಾಪ || ೮ ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...