Home / ಕವನ / ಕವಿತೆ / ತೊಳೆಯು ಬಾ ಬಸವ

ತೊಳೆಯು ಬಾ ಬಸವ

ಎಷ್ಟು ತಿಕ್ಕಿದರೂ ಸ್ವಚ್ಛವಾಗದಿದೆ
ಜನರ ಬುದ್ಧಿ ಭಾವ
ಅಂದು ತಿಕ್ಕಿದೆಯೊ ಇಂದು ತೊಳೆಯು ಬಾ
ಶುದ್ಧ ಬುದ್ಧ ಬಸವ || ಪ ||

ಯಜ್ಞಯಾಗಗಳ ಪೂಜೆ ನೇಮಗಳ
ನೆಪದಲಿ ಜನರನು ಸುಲಿವ
ಪುರಾಣ ಶಾಸ್ತ್ರವ ಸುಳ್ಳು ಕಂತೆಗಳ
ಹೇಳುತ ಹೊಟ್ಟೆಯ ಹೊರೆವ || ೧ ||

ಪೂಜಾರಿ ವರ್ಗ ಬದುಕಿನ ಮಾರ್ಗ
ಎಂದು ಹಳಿದು ಅವರ
ಸರಳ ಸಂಬಂಧ ದೇವಭಕ್ತರಿಗೆ
ಕಲ್ಪಿಸಿದೆ ಉಳಿಸಿ ಜನರ || ೨ ||

ದಿನವಾರಗಳನು ಗ್ರಹ ತಾರೆಗಳನು
ಎಣಿಸುವ ಗುಣಿಸುವ ತಂತ್ರ
ಮೋಸವೆಂದೆ ಜ್ಯೋತಿಷ್ಯ ಶಾಸ್ತ್ರ
ಮೈಗಳೃ ಜನರ ಕುತಂತ್ರ || ೩ ||

ಶಿವನ ನೆನೆದು ದಿನ ರಾತ್ರಿ ಕಳೆಯುವಗೆ
ಪ್ರತಿಕ್ಷಣವು ಸುಮುಹೂರ್ತ
ಶಿವನನು ಎಲ್ಲೆಡೆ ಕಾಂಬ ಭಕ್ತರಿಗೆ
ಇಹವೆಲ್ಲ ಕರ್ಮ ಕರ್ತ || ೪ ||

ನೋವು ನಷ್ಟಗಳ ವ್ಯಾಧಿ ಬಾಧೆಗಳ
ಭಯವು ಹೆಚ್ಚಿನದು ಮರಣ
ಭಯವೆ ಮೌಢ್ಯತೆಗೆ ಮೂಲ ಭಕ್ತನಿಗೆ
ಮಹಾನವಮಿ ಆ ಮರಣ || ೫ ||

ಮೌಢ್ಯಶೋಷಣೆಯ ಮುಕ್ತ ಸಮಾಜವ
ನಿರ್ಮಿಸ ಬಯಸಿದೆ ನೀನು
ಮನುಜ ಮಹಿಮೆಯನು ಎತ್ತಿ ಹಿಡಿದ ನೀ
ಯುಗದ ಜಗದ ಭಾನು || ೬ ||
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್