Home / ಕವನ / ಕವಿತೆ / ತೊಳೆಯು ಬಾ ಬಸವ

ತೊಳೆಯು ಬಾ ಬಸವ

ಎಷ್ಟು ತಿಕ್ಕಿದರೂ ಸ್ವಚ್ಛವಾಗದಿದೆ
ಜನರ ಬುದ್ಧಿ ಭಾವ
ಅಂದು ತಿಕ್ಕಿದೆಯೊ ಇಂದು ತೊಳೆಯು ಬಾ
ಶುದ್ಧ ಬುದ್ಧ ಬಸವ || ಪ ||

ಯಜ್ಞಯಾಗಗಳ ಪೂಜೆ ನೇಮಗಳ
ನೆಪದಲಿ ಜನರನು ಸುಲಿವ
ಪುರಾಣ ಶಾಸ್ತ್ರವ ಸುಳ್ಳು ಕಂತೆಗಳ
ಹೇಳುತ ಹೊಟ್ಟೆಯ ಹೊರೆವ || ೧ ||

ಪೂಜಾರಿ ವರ್ಗ ಬದುಕಿನ ಮಾರ್ಗ
ಎಂದು ಹಳಿದು ಅವರ
ಸರಳ ಸಂಬಂಧ ದೇವಭಕ್ತರಿಗೆ
ಕಲ್ಪಿಸಿದೆ ಉಳಿಸಿ ಜನರ || ೨ ||

ದಿನವಾರಗಳನು ಗ್ರಹ ತಾರೆಗಳನು
ಎಣಿಸುವ ಗುಣಿಸುವ ತಂತ್ರ
ಮೋಸವೆಂದೆ ಜ್ಯೋತಿಷ್ಯ ಶಾಸ್ತ್ರ
ಮೈಗಳೃ ಜನರ ಕುತಂತ್ರ || ೩ ||

ಶಿವನ ನೆನೆದು ದಿನ ರಾತ್ರಿ ಕಳೆಯುವಗೆ
ಪ್ರತಿಕ್ಷಣವು ಸುಮುಹೂರ್ತ
ಶಿವನನು ಎಲ್ಲೆಡೆ ಕಾಂಬ ಭಕ್ತರಿಗೆ
ಇಹವೆಲ್ಲ ಕರ್ಮ ಕರ್ತ || ೪ ||

ನೋವು ನಷ್ಟಗಳ ವ್ಯಾಧಿ ಬಾಧೆಗಳ
ಭಯವು ಹೆಚ್ಚಿನದು ಮರಣ
ಭಯವೆ ಮೌಢ್ಯತೆಗೆ ಮೂಲ ಭಕ್ತನಿಗೆ
ಮಹಾನವಮಿ ಆ ಮರಣ || ೫ ||

ಮೌಢ್ಯಶೋಷಣೆಯ ಮುಕ್ತ ಸಮಾಜವ
ನಿರ್ಮಿಸ ಬಯಸಿದೆ ನೀನು
ಮನುಜ ಮಹಿಮೆಯನು ಎತ್ತಿ ಹಿಡಿದ ನೀ
ಯುಗದ ಜಗದ ಭಾನು || ೬ ||
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...