Home / ಕವನ / ಕವಿತೆ / ಗುರು ನಮನ

ಗುರು ನಮನ

ಗುರುವೆ ನಮೋ ಶ್ರೀ ಗುರುವೆ ನಮೋ
ಸದ್ಗುರುವೆ ನಮೋ ವರಗುರುವೆ ನಮೋ || ಪ ||

ಗುರುವೇ ಹರ ನಮೋ ಗುರುವೇ ಹರಿ ನಮೋ
ಗುರುವೆ ಬ್ರಹ್ಮ ಪರಗುರುವೆ ನಮೋ ||ಅ.ಪ.||

ತಾಯಿಯ ಒಲುಮೆ ತಂದೆಯ ಬಲುಮೆ
ಬಂಧು ಬಳಗ ಬಲ ನೀನೆ ಗುರು
ಲೋಕಕ್ಕೆಲ್ಲಾ ಹಿರಿಯನು ನೀನು
ದೇವತೆಗಳಿಗೂ ನೀನೆ ಗುರು || ೧ ||

ಆದಿ ಕಾಲದಲಿ ವೇದಗಳುಸುರಿದೆ
ಪ್ರಕೃತಿಯಲ್ಲಿ ಪರಮಾತ್ಮನ ಕಂಡೆ
ಉಪನಿಷತ್ತುಗಳ ಮರ್ಮವ ತಿಳಿಸಿದೆ
ಆತ್ಮ ವಿದ್ಯೆಯ ಸುಧೆಯೆರೆದೆ || ೨ ||

ಅಕ್ಷರ ಅಕ್ಷರ ಕಲಿಸುತ ಆಕ್ಷರ
ಬ್ರಹ್ಮದ ಶಿಖರಕೆ ಕರೆದೊಯ್ದೆ
ನಶ್ಚರ ಜಗದಲಿ ಶಾಶ್ವತದಿರವನು
ಈಶ್ವರತ್ವವನು ತೋರಿಸಿದೆ || ೩ ||

ಜೀವನ ಬೆಲೆಯನು ತಿಳಿಸಿದ ಗುರುವೇ
ಜೀವನ ಕಲೆಯನು ಕಲಿಸಿದೆ ನೀ
ಪಶುವಿನಿಂದ ಪಶುಪತಿಯ ಹಿರಿಮೆಯನು
ನರಕದಿ ನಾಕವ ತೋರಿದೆ ನೀ || ೪ ||

ನಡೆಯನು ತಿದ್ದಿದೆ ನುಡಿಯನು ತೀಡಿದೆ
ನಡೆನುಡಿ ಬೆರೆಯಲು ಕೈಲಾಸ
ಇಹದಲಿ ಜಯವನು ಪರದ ವಿಜಯವನು
ತೋರಿದೆ ಜೀವನದುಲ್ಲಾಸ || ೫ ||

ಶಾಸ್ತ್ರಪುರಾಣಗಳಾಗಮ ವಿಧಿಗಳು
ಯುದ್ಧ ವೈದ್ಯತಂತ್ರಾದಿಗಳು
ಅರವತ್ ನಾಲಕು ವಿದ್ಯೆಗಳೆಲ್ಲಾ
ನೀನಿತ್ತಿರುವ ದಾನಗಳು || ೬ ||

ಸುಂದರ ಗಿಡಗಳ ಹೂ ತೋಟದೊಲು
ವಿದ್ಯಾರ್ಥಿಗಳನು ಬೆಳೆಯಿಸುವೆ
ಕಲ್ಲಲಿ ಶಿಲ್ಪವ ರೂಪುಗೊಳಿಸುವೊಲು
ಮಹಾಮಾನವರ ಮೂರ್ತಿಸುವೆ || ೭ ||

ನಾಡು ನುಡಿಗಳಭಿಮಾನವ ತುಂಬುತ
ದೇಶಭಕ್ತರನು ನಿರ್ಮಿಸುವೆ
ಶ್ರದ್ದೆ ಶಕ್ತಿಗಳ ನ್ಯಾಯ ನೀತಿಗಳ
ಜನನಾಯಕರನು ರೂಪಿಸುವೆ || ೮ ||

ಜಾತಿ ಭೇದಗಳು ನಿನಗಿಲ್ಲಾ ಮತ
ಪಂಥಮೇರೆಗಳು ನಿನಗಿಲ್ಲ
ಸರ್ವರಲಿ ಸಮ ದೃಷ್ಟಿ ನಿನ್ನದು
ಮೇಲು ಕೀಳುಗಳು ನಿನಗಿಲ್ಲ || ೯ ||

ನ್ಯಾಯ ನಿಷ್ಟುರನು ಸತ್ಯ ಸಾಧಕನು
ಖಂಡಿತವಾದಿಯು ನೀನು ಗುರು
ಧೀರರಲ್ಲಿ ಅತಿಧೀರ ಮಹಾತ್ಮನೆ
ಮರಣವ ಮೀರಿದ ಮಹಾಗುರು || ೧೦ ||

ನೀನಿಲ್ಲದೆ ಜಗ ಪಶುರಕ್ಕಸರಿಂ
ಅಂಧಕಾರದಲಿ ಮುಳುಗುವುದೋ
ನಿನ್ನಿಂದಲೇ ಈ ಲೋಕದ ಸಂಸ್ಕೃತಿ
ಕಲೆ ಸಾಹಿತ್ಯವು ಬೆಳಗುವುದೋ || ೧೧ ||

ಕತ್ತಲೆಯಿಂದ ಬೆಳಕಿನ ಕಡೆಗೆ
ಅಸತ್ಯದಿಂದ ಸತ್ಯದ ಎಡೆಗೆ
ಮರ್ತ್ಯದಿಂದ ಅಮೃತತ್ವದ ಗುರಿಗೆ
ನಮ್ಮನು ಒಯ್ಯುವ ಗುರುವೆ ನಮೋ || ೧೨ ||
*****
(ಶಿಕ್ಷಕರ ದಿನಾಚರಣೆಯಲ್ಲಿ ಸಾದರಪಡಿಸಿದ ಕವನ)

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...