Home / ಕವನ / ಕವಿತೆ / ಗುರು ನಮನ

ಗುರು ನಮನ

ಗುರುವೆ ನಮೋ ಶ್ರೀ ಗುರುವೆ ನಮೋ
ಸದ್ಗುರುವೆ ನಮೋ ವರಗುರುವೆ ನಮೋ || ಪ ||

ಗುರುವೇ ಹರ ನಮೋ ಗುರುವೇ ಹರಿ ನಮೋ
ಗುರುವೆ ಬ್ರಹ್ಮ ಪರಗುರುವೆ ನಮೋ ||ಅ.ಪ.||

ತಾಯಿಯ ಒಲುಮೆ ತಂದೆಯ ಬಲುಮೆ
ಬಂಧು ಬಳಗ ಬಲ ನೀನೆ ಗುರು
ಲೋಕಕ್ಕೆಲ್ಲಾ ಹಿರಿಯನು ನೀನು
ದೇವತೆಗಳಿಗೂ ನೀನೆ ಗುರು || ೧ ||

ಆದಿ ಕಾಲದಲಿ ವೇದಗಳುಸುರಿದೆ
ಪ್ರಕೃತಿಯಲ್ಲಿ ಪರಮಾತ್ಮನ ಕಂಡೆ
ಉಪನಿಷತ್ತುಗಳ ಮರ್ಮವ ತಿಳಿಸಿದೆ
ಆತ್ಮ ವಿದ್ಯೆಯ ಸುಧೆಯೆರೆದೆ || ೨ ||

ಅಕ್ಷರ ಅಕ್ಷರ ಕಲಿಸುತ ಆಕ್ಷರ
ಬ್ರಹ್ಮದ ಶಿಖರಕೆ ಕರೆದೊಯ್ದೆ
ನಶ್ಚರ ಜಗದಲಿ ಶಾಶ್ವತದಿರವನು
ಈಶ್ವರತ್ವವನು ತೋರಿಸಿದೆ || ೩ ||

ಜೀವನ ಬೆಲೆಯನು ತಿಳಿಸಿದ ಗುರುವೇ
ಜೀವನ ಕಲೆಯನು ಕಲಿಸಿದೆ ನೀ
ಪಶುವಿನಿಂದ ಪಶುಪತಿಯ ಹಿರಿಮೆಯನು
ನರಕದಿ ನಾಕವ ತೋರಿದೆ ನೀ || ೪ ||

ನಡೆಯನು ತಿದ್ದಿದೆ ನುಡಿಯನು ತೀಡಿದೆ
ನಡೆನುಡಿ ಬೆರೆಯಲು ಕೈಲಾಸ
ಇಹದಲಿ ಜಯವನು ಪರದ ವಿಜಯವನು
ತೋರಿದೆ ಜೀವನದುಲ್ಲಾಸ || ೫ ||

ಶಾಸ್ತ್ರಪುರಾಣಗಳಾಗಮ ವಿಧಿಗಳು
ಯುದ್ಧ ವೈದ್ಯತಂತ್ರಾದಿಗಳು
ಅರವತ್ ನಾಲಕು ವಿದ್ಯೆಗಳೆಲ್ಲಾ
ನೀನಿತ್ತಿರುವ ದಾನಗಳು || ೬ ||

ಸುಂದರ ಗಿಡಗಳ ಹೂ ತೋಟದೊಲು
ವಿದ್ಯಾರ್ಥಿಗಳನು ಬೆಳೆಯಿಸುವೆ
ಕಲ್ಲಲಿ ಶಿಲ್ಪವ ರೂಪುಗೊಳಿಸುವೊಲು
ಮಹಾಮಾನವರ ಮೂರ್ತಿಸುವೆ || ೭ ||

ನಾಡು ನುಡಿಗಳಭಿಮಾನವ ತುಂಬುತ
ದೇಶಭಕ್ತರನು ನಿರ್ಮಿಸುವೆ
ಶ್ರದ್ದೆ ಶಕ್ತಿಗಳ ನ್ಯಾಯ ನೀತಿಗಳ
ಜನನಾಯಕರನು ರೂಪಿಸುವೆ || ೮ ||

ಜಾತಿ ಭೇದಗಳು ನಿನಗಿಲ್ಲಾ ಮತ
ಪಂಥಮೇರೆಗಳು ನಿನಗಿಲ್ಲ
ಸರ್ವರಲಿ ಸಮ ದೃಷ್ಟಿ ನಿನ್ನದು
ಮೇಲು ಕೀಳುಗಳು ನಿನಗಿಲ್ಲ || ೯ ||

ನ್ಯಾಯ ನಿಷ್ಟುರನು ಸತ್ಯ ಸಾಧಕನು
ಖಂಡಿತವಾದಿಯು ನೀನು ಗುರು
ಧೀರರಲ್ಲಿ ಅತಿಧೀರ ಮಹಾತ್ಮನೆ
ಮರಣವ ಮೀರಿದ ಮಹಾಗುರು || ೧೦ ||

ನೀನಿಲ್ಲದೆ ಜಗ ಪಶುರಕ್ಕಸರಿಂ
ಅಂಧಕಾರದಲಿ ಮುಳುಗುವುದೋ
ನಿನ್ನಿಂದಲೇ ಈ ಲೋಕದ ಸಂಸ್ಕೃತಿ
ಕಲೆ ಸಾಹಿತ್ಯವು ಬೆಳಗುವುದೋ || ೧೧ ||

ಕತ್ತಲೆಯಿಂದ ಬೆಳಕಿನ ಕಡೆಗೆ
ಅಸತ್ಯದಿಂದ ಸತ್ಯದ ಎಡೆಗೆ
ಮರ್ತ್ಯದಿಂದ ಅಮೃತತ್ವದ ಗುರಿಗೆ
ನಮ್ಮನು ಒಯ್ಯುವ ಗುರುವೆ ನಮೋ || ೧೨ ||
*****
(ಶಿಕ್ಷಕರ ದಿನಾಚರಣೆಯಲ್ಲಿ ಸಾದರಪಡಿಸಿದ ಕವನ)

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...