ಬಾಯೊಡೆದ ಚೀಲ

ರಸ್ತೆ ನಡುವೆ ರಾಗಿ ಚೆಲ್ಲಿಕೊಂಡು
ಬಾಚಿ ಎತ್ತಲೂ ಆಗದೆ ನಿಂತಿದ್ದಾನೆ ಹುಡುಗ.
ಬಾಯೊಡೆದ ಚೀಲ ಬಿದ್ದಿದೆ ಬೀದಿನಡುವೆ;
ಹಾಯುತಿದೆ ಅದರದೆಯ ಮೇಲೆಯೇ ಒಂದೆ ಸಮ
ಕಾರು ಸ್ಕೂಟರ್ ಲಾರಿ,
ಈಟಿದನಿಯಲಿ ಮೈಲಿ ಎಚ್ಚರಿಕೆ ಚೀರಿ.

ಬಿದ್ದ ಕಾಳಿನ ಮೇಲೆ ಒದ್ದೆ ದೃಷ್ಟಿಯ ಚೆಲ್ಲಿ
ನಿಂತ ಹುಡುಗನ ದೀನ ನೋಟ,
ಎದುರೆ ಬಿದ್ದಿದೆ ಮಣ್ಣು ಪಾಲಾಗಿ ಮನೆಯವರ
ಅಂದಿನೂಟ,
ಏನೊ ತಲ್ಲಣ ಭೀತಿ ಕಲೆಸಿ ಕರಿಗಪ್ಪಾದ
ನೋವಿನ ಮುಖ,
ಗಾಜಿನಾಲಿಗಳಂಥ ಕಣ್ಣು ಜಿನುಗುತ್ತಿದೆ
ಅನಂತದುಃಖ.

ರಾಗಿ ಚಲ್ಲಿದ್ದಕ್ಕೆ ಕೂಗಿ ಗದರಿಸುತ್ತಿರುವ
ಪೋಲೀಸು ಪೇದೆ,
ಬರಲಿರುವ ಕತ್ತಲೆಯ ಕೂಗಿ ಕರೆಯುತ್ತಿರುವ
ಗಿರಣಿ ಕೊರಳಿನ ಕಪ್ಪುಬೇಗೆ,
ಬಾನ ಮೈತುಂಬೆಲ್ಲ ಬಿಳಿ ತೊನ್ನ ಹಚ್ಚಿರುವ
ತೇವವಿಲ್ಲದ ಮುಗಿಲ ಕ್ರೌರ್ಯ,
ಬಡವರೊಡಲಿನ ಕಿಚ್ಚೆ ಅಚ್ಚಾಗಿ ಆಗಸದ
ಅಂಚಿನಲಿ ಸಂಜೆ ಸೂರ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೊಳಲಿನಾ ಕರೆ
Next post ನಾನು ನಿನ್ನ ಪ್ರೀತಿ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys