ಕಾಲ

ಕಾಲ ಕರುಳಿಲ್ಲದ ಕರೀ ಘಡವ,
ಕದಿಯುವುದರಲ್ಲಿ ಕತ್ತೆಭಡವ.
ಬಂತೆನ್ನಿ ಆಸಾಮಿ ಪಟ್ಟಿಗೆ
ಹಾರಿಸುತ್ತಾನೆ ಒಟ್ಟಿಗೆ:
ನಾಲಿಗೆಯಿಂದ ಮಾತು,
ಆಲಿಗಳಿಂದ ಬೆಳಕು,
ಎದೆಯಿಂದ ಚಿಲುಮೆ,
ಕೈಯಿಂದ ದುಡಿಮೆ.
ಹೀಗೆ ಕಿತ್ತು ಪಟ ಪಟ ಇಟ್ಟಿಗೆ
ತಳ್ಳಿಬಿಡುತ್ತಾನೆ ದೈತ್ಯ
ಬ್ರೂಸ್‍ಲೀಯನ್ನೂ ಸಹ
ಆರಡಿ ಅಗಲದ
ಮಣ್ಣಿನ ತೊಟ್ಟಿಗೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೯೮
Next post ತೆರೆ ಹಾಸು ಪಾಸು

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys