Home / ಕವನ / ಕವಿತೆ / ಒಂದು ಸಲ ಹೀಗಾಯಿತು

ಒಂದು ಸಲ ಹೀಗಾಯಿತು

ಕಲ್ಲಿನಂತಿದ್ದ ಹಲ್ಲನ್ನು
ಕಾಣದ ಕ್ರಿಮಿಗಳು ತಿಂದು
ಬೆಳಕಿನ ದಳದಂಥ ಹಲ್ಲು ಹುಳಿತು ಕಪ್ಪಾಗಿ ಹೋಯಿತು.
ಕಬ್ಬು ಸಿಗಿದ ಯಂತ್ರ ಕಡಲೆಪುರಿಗೆ ಬೆದರಿ
ನಿಂತರೆ ನೋವು, ಕೂತರೆ ನೋವು
ಮುಖ ಬಾತು ಮೂತಿ ಕುಂಬಳಕಾಯಾಯಿತು.
ಕಂಡ ಸ್ನೇಹಿತರೆಲ್ಲ ಕಷ್ಟಪಟ್ಟು ಗುರುತಿಸಿ
“ಏನೋ ಹನುಮಂತರಾಯ
ಹೆಸರು ನಿಜಮಾಡಿಕೊಂಡೆಯಲ್ಲೋ
ಯಾರ ಪ್ರಸಾದವಪ್ಪಾ” ಎಂದು ಕಿಚಾಯಿಸಿದರು!
ವಿಚಾರವೆಲ್ಲ ತಿಳಿದು –
“ಹಲ್ಲಿನ ಹಳ್ಳ ಮುಚ್ಚಿಸಿಬಿಡು ಅಥವಾ
ಹಾಳು ಹಲ್ಲೇ ಕಿತ್ತಿಸಿಬಿಡು
ಜೊತೆಗೇ ವಕ್ರ ಹಲ್ಲೆಲ್ಲ ಎತ್ತಿಸಿಬಿಡು!”
ಡೆಂಟಿಸ್ಟ್ ಜವರಪ್ಪ ಗೊತ್ತಲ್ಲ
ಮಹಾಪ್ರಚಂಡ
ಪಿಯುಸಿಲಿದ್ದಾಗಲೇ ಮೆಡಿಕಲ್ ಸೀಟು ಗಿಟ್ಟಿಸಿ
ತೊಂಬತ್ನಾಲ್ಕು ಪರ್ಸೆಂಟಿಗೇ ಟಾಂಗು ಕೊಟ್ಟ ಪಿಂಡ!
ಬಹಳ ವರ್ಷ ಓದಿದ್ದಾರೆ
ಬಹಳ ಪರೀಕ್ಷೆ ಬರೆದಿದ್ದಾರೆ
ಬಂದ ಕೇಸು ಎಂಥದೇ ಇರಲಿ
ಚೂರೂ ಉಳಿಯದಂತೆ ಕೀಳುತ್ತಾರೆ
ಹೋಗು, ಇಡಿಯ ಬಾಯೇ ಸರಿ ಮಾಡುತ್ತಾರೆ”
ಅಂತ ನಗುತ್ತ ಸಲಹೆ ಕೊಟ್ಟು
ಟಾಟಾ ಗುಡ್‌ಬೈ ಫೇರ್‌ವೆಲ್ ಎಲ್ಲ ಕಿರಿಚಿ ಹೋದರು.
ಬೆಳಿಗ್ಗೆ ಎದ್ದವನೇ ಡಾಕ್ಟರಲ್ಲಿಗೆ ಓಡಿದೆ.
ಸೋಡಾ ಸೀಸೆ ಕನ್ನಡಕದ
ಸೇಡಿನ ಛಾಯೆ ಮುಖದ
ಆರಡಿ ಸೈಂಧವ ಡಾಕ್ಟರನ್ನು ನೋಡಿ
ಒಳಗೇ ಜೀವ ನಡುಗಿತು.
ಬ್ಯಾಸ್ಕೆಟ್‌ಬಾಲ್‌ ಕ್ಯಾಪ್ಟನ್ನಿನಂತಿದ್ದ ಡಾಕ್ಟರು
ಕುರ್ಚಿಗೆ ನನ್ನನ್ನು ತಳ್ಳಿ
ಕಣ್ಣೆತ್ತರಕ್ಕೇರಿಸಿಕೊಂಡರು
ಮರದ ಸಣ್ಣ ಸುತ್ತಿಗೆ ಎತ್ತಿಕೊಂಡು
ತಲೆಗೆ ಸರ್ಚ್‍ಲೈಟ್ ಬಿಟ್ಟರು.
ಸುತ್ತಿಗೆಯಿಂದ ಮೆತ್ತಗೆ ನೆತ್ತಿ ಮೇಲೆ ಬಡಿದರು
ಕತ್ತಿನ ಕೆಳಗೆ ಬಡಿದರು
ಕುತ್ತಿಗೆ ಪಕ್ಕ ಬಡಿದರು.
ಗಾಬರಿಯಾಗಿ ‘ಡಾಕ್ಟರೇ!’ ಎಂದೆ.
‘ಯೋಚನೆ ಬೇಡಿ ಎಲ್ಲ ನಿರ್ನಾಮ ಮಾಡಿಬಿಡುತ್ತೇನೆ’ ಎಂದರು
‘ಅಲ್ಲಲ್ಲ ಡಾಕ್ಟರೇ, ಇಲ್ಲಿ ಹಲ್ಲು’ ಎಂದೆ.
‘ಹಯ್ಯೋ ಅಜ್ಞಾನವೆ!
ಅಲ್ಲಿಗೆ ಇಲ್ಲಿಗೆ ಹಲ್ಲಿಗೆ
ನಡುನೆತ್ತಿಯಿಂದ ಎಲ್ಲೆಂದರಲ್ಲಿಗೆ
ಎಲ್ಲದಕ್ಕೂ ಸಂಬಂಧವಿದೆ ಇವರೆ
ಇಲ್ಲಿ ತಟ್ಟಿದರೆ ಅಲ್ಲಿ ಅಲುಗಬೇಕು, ಕೇಳಿಲ್ಲವಾ
You cannot stir a stone
without disturbing a star’ ಎಂದರು!
ಒಳ್ಳೆ ಗ್ರಹಚಾರವಾಯಿತಲ್ಲ ಎನ್ನಿಸಿತು.
ಚಾಕು ಸೂಜಿ ಕತ್ತರಿ ಎಲ್ಲ
ನನ್ನೆದುರೇ ಕುದಿಸಲು ಹಾಕಿ
ಕೂತಿರಿ ಹೊರಗೆ ಮತ್ತೆ ಕರೆಯುತ್ತೇನೆ ಒಳಗೆ
ಎಂದರು ಡಾಕ್ಟರು.
ಅದುರುವ ಎದೆ ಹಿಡಿದು ಕೂತು
ಎದುರಿಗಿದ್ದ ಪೇಪರ್ ಎತ್ತಿಕೊಂಡರೆ
ಮುಖಪುಟದಲ್ಲೇ ವೈದ್ಯರ ಚಳುವಳಿ
ಕ್ಯಾಪಿಟೇಷನ್ ರದ್ದು ಮಾಡಿ ಕತ್ತೆಗಳನ್ನು ಹೊರದೂಡಿ
ಎಂಬ ದಪ್ಪಕ್ಷರದ ಕಳಕಳಿ!

ಪರಿಸ್ಥಿತಿ ಅರ್ಥವಾಯಿತು.
ಕುದಿಯುವ ಪದಾರ್ಥಗಳನ್ನು ಬದಿಯಲ್ಲಿದ್ದವರಿಗೆ ಬಿಟ್ಟು
ಹೇಳದೆ ಕೇಳದೆ ಡಾಕ್ಟರಿಗೆ
ಹಾರಿ ಹೊರಬಂದೆ ಬೀದಿಗೆ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...