Home / ಕವನ / ಕವಿತೆ / ನಡುನೀರಿನಲ್ಲಿ

ನಡುನೀರಿನಲ್ಲಿ

ದೀಪ ಹಚ್ಚಿ
ಹೃದಯ ಬಿಚ್ಚಿ
ದೈವದ ಪಾದಕ್ಕೆ ಹಣೆ ಹಣೆ ಚಚ್ಚಿ ಬೇಡಿದೆವು ಅಂದು :
ಇವಗೊದಗಲಿ ಹಿರಿತನ
ಮೇಲೇಳಲಿ ಮನೆತನ
ಮೈ ತುಂಬಲಿ ಕ್ಷೀಣಿಸಿದ ಮನೆಭಾಗ್ಯ ಎಂದು.
* * *

ನೀ ಬಂದೆ
ನಮ್ಮ ನಡುವೆ ನಿಂದೆ
ಏನೇನೋ ನಿರೀಕ್ಷೆ ತಂದೆ.
ನೀ ನಿಂತ ನೆಲ ಬೆಳೆ ಚಿಮ್ಮುವ ಹೊಲವಾಗಿ
ನೀ ಸೋಕಿದ ಮರಕ್ಕೆ ಮೈತುಂಬ ಫಲವಾಗಿ
ಬತ್ತಿದ ಜಲಗಳೆಲ್ಲ ಮತ್ತೆ ಕಾಣಿಸಿಕೊಂಡು
ಬಣ್ಣದ ಚಿತ್ತಾರವಾದೀತು ಬ್ಳು ಬದುಕು ಎಂದು
ತುದಿಗಾಲಿನಲಿ ನಿಂತು ಎರಡು ಬದಿಗೆ
ಕಾದೆಉ ದಿನಾ ಅಂಥ ಸಿರಿಗಳಿಗೆಗೆ.
* * *

ಹರಿದ ಕಾಗದದಂಥ ಬಿಳಿ ಮುಗಿಲ ಚೂರು
ಎಲ್ಲೊ ಐದಾರು ಬಾನಿನಲ್ಲಿ
ಯಾವಾಗ ಆದುವೋ ಕರಿಯ ಕಂಬಳಿ ಚೂರು
ನೂರು ಸಾವಿರ ಈಗ ಮಾಯದಲ್ಲಿ.
ಎಲ್ಲ ಒಂದಕ್ಕೊಂದು ಸೇರಿಕೊಂಡು
ದಟ್ಟವಾಗಿ, ನೀರ ಬೆಟ್ಟವಾಗಿ
ಸಾಗಿಬಂದವು ಮಾರಿಗಾಲಲ್ಲಿ ಜೋರಲ್ಲಿ
ಕಾಳವರ್ಷಿಣಿ ಕೂಗು ಹಾಕಿಕೊಂಡು.
ಬೆನ್ನ ಚಪ್ಪರಿಸಿ ಛೂ ಬಿಟ್ಟಿತೆಲ್ಲಿಂದಲೋ
ಮೇಲೆದ್ದು ಬಂದ ಮನೆಮುರುಕ ಗಾಳಿ
ಬಂತು ಬಂತೋ ಬಂತು ನಗುವ ನೆಲದೆದೆಗೆ
ಪ್ರಳಯ ಕಾಲದ ಮೊದಲ ಕಂತು ಎನುವಂತೆ
ಜಲದ ದಾಳಿ!
* * *

ಹಿಂದೆ ಇಷ್ಟಾದರೂ ಹಸಿರಿದ್ದ ನೆಲವೆ ಇದು?
ಕಾಲಿಟ್ಟ ಕಡೆಯೆಲ್ಲ ಕೆಸರು,
ಹರಿದ ಛಾವಣಿ ಮುರಿದುಬಿದ್ದ ಗಿಡಗಂಟಿ
ಒಡೆದ ಸೂರು.
ಬೀದಿ ಮನೆ ಅಂಗಡಿ ಚರಂಡಿ ಡೈನೇಜುಗಳ
ಒಂದುಗೂಡಿಸಿ ನಿತ ಹೊಲಸು ನೀರು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...