Home / ಕವನ / ಕವಿತೆ / ನಡುನೀರಿನಲ್ಲಿ

ನಡುನೀರಿನಲ್ಲಿ

ದೀಪ ಹಚ್ಚಿ
ಹೃದಯ ಬಿಚ್ಚಿ
ದೈವದ ಪಾದಕ್ಕೆ ಹಣೆ ಹಣೆ ಚಚ್ಚಿ ಬೇಡಿದೆವು ಅಂದು :
ಇವಗೊದಗಲಿ ಹಿರಿತನ
ಮೇಲೇಳಲಿ ಮನೆತನ
ಮೈ ತುಂಬಲಿ ಕ್ಷೀಣಿಸಿದ ಮನೆಭಾಗ್ಯ ಎಂದು.
* * *

ನೀ ಬಂದೆ
ನಮ್ಮ ನಡುವೆ ನಿಂದೆ
ಏನೇನೋ ನಿರೀಕ್ಷೆ ತಂದೆ.
ನೀ ನಿಂತ ನೆಲ ಬೆಳೆ ಚಿಮ್ಮುವ ಹೊಲವಾಗಿ
ನೀ ಸೋಕಿದ ಮರಕ್ಕೆ ಮೈತುಂಬ ಫಲವಾಗಿ
ಬತ್ತಿದ ಜಲಗಳೆಲ್ಲ ಮತ್ತೆ ಕಾಣಿಸಿಕೊಂಡು
ಬಣ್ಣದ ಚಿತ್ತಾರವಾದೀತು ಬ್ಳು ಬದುಕು ಎಂದು
ತುದಿಗಾಲಿನಲಿ ನಿಂತು ಎರಡು ಬದಿಗೆ
ಕಾದೆಉ ದಿನಾ ಅಂಥ ಸಿರಿಗಳಿಗೆಗೆ.
* * *

ಹರಿದ ಕಾಗದದಂಥ ಬಿಳಿ ಮುಗಿಲ ಚೂರು
ಎಲ್ಲೊ ಐದಾರು ಬಾನಿನಲ್ಲಿ
ಯಾವಾಗ ಆದುವೋ ಕರಿಯ ಕಂಬಳಿ ಚೂರು
ನೂರು ಸಾವಿರ ಈಗ ಮಾಯದಲ್ಲಿ.
ಎಲ್ಲ ಒಂದಕ್ಕೊಂದು ಸೇರಿಕೊಂಡು
ದಟ್ಟವಾಗಿ, ನೀರ ಬೆಟ್ಟವಾಗಿ
ಸಾಗಿಬಂದವು ಮಾರಿಗಾಲಲ್ಲಿ ಜೋರಲ್ಲಿ
ಕಾಳವರ್ಷಿಣಿ ಕೂಗು ಹಾಕಿಕೊಂಡು.
ಬೆನ್ನ ಚಪ್ಪರಿಸಿ ಛೂ ಬಿಟ್ಟಿತೆಲ್ಲಿಂದಲೋ
ಮೇಲೆದ್ದು ಬಂದ ಮನೆಮುರುಕ ಗಾಳಿ
ಬಂತು ಬಂತೋ ಬಂತು ನಗುವ ನೆಲದೆದೆಗೆ
ಪ್ರಳಯ ಕಾಲದ ಮೊದಲ ಕಂತು ಎನುವಂತೆ
ಜಲದ ದಾಳಿ!
* * *

ಹಿಂದೆ ಇಷ್ಟಾದರೂ ಹಸಿರಿದ್ದ ನೆಲವೆ ಇದು?
ಕಾಲಿಟ್ಟ ಕಡೆಯೆಲ್ಲ ಕೆಸರು,
ಹರಿದ ಛಾವಣಿ ಮುರಿದುಬಿದ್ದ ಗಿಡಗಂಟಿ
ಒಡೆದ ಸೂರು.
ಬೀದಿ ಮನೆ ಅಂಗಡಿ ಚರಂಡಿ ಡೈನೇಜುಗಳ
ಒಂದುಗೂಡಿಸಿ ನಿತ ಹೊಲಸು ನೀರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...