Home / ಕವನ / ಕವಿತೆ / ನಡುನೀರಿನಲ್ಲಿ

ನಡುನೀರಿನಲ್ಲಿ

ದೀಪ ಹಚ್ಚಿ
ಹೃದಯ ಬಿಚ್ಚಿ
ದೈವದ ಪಾದಕ್ಕೆ ಹಣೆ ಹಣೆ ಚಚ್ಚಿ ಬೇಡಿದೆವು ಅಂದು :
ಇವಗೊದಗಲಿ ಹಿರಿತನ
ಮೇಲೇಳಲಿ ಮನೆತನ
ಮೈ ತುಂಬಲಿ ಕ್ಷೀಣಿಸಿದ ಮನೆಭಾಗ್ಯ ಎಂದು.
* * *

ನೀ ಬಂದೆ
ನಮ್ಮ ನಡುವೆ ನಿಂದೆ
ಏನೇನೋ ನಿರೀಕ್ಷೆ ತಂದೆ.
ನೀ ನಿಂತ ನೆಲ ಬೆಳೆ ಚಿಮ್ಮುವ ಹೊಲವಾಗಿ
ನೀ ಸೋಕಿದ ಮರಕ್ಕೆ ಮೈತುಂಬ ಫಲವಾಗಿ
ಬತ್ತಿದ ಜಲಗಳೆಲ್ಲ ಮತ್ತೆ ಕಾಣಿಸಿಕೊಂಡು
ಬಣ್ಣದ ಚಿತ್ತಾರವಾದೀತು ಬ್ಳು ಬದುಕು ಎಂದು
ತುದಿಗಾಲಿನಲಿ ನಿಂತು ಎರಡು ಬದಿಗೆ
ಕಾದೆಉ ದಿನಾ ಅಂಥ ಸಿರಿಗಳಿಗೆಗೆ.
* * *

ಹರಿದ ಕಾಗದದಂಥ ಬಿಳಿ ಮುಗಿಲ ಚೂರು
ಎಲ್ಲೊ ಐದಾರು ಬಾನಿನಲ್ಲಿ
ಯಾವಾಗ ಆದುವೋ ಕರಿಯ ಕಂಬಳಿ ಚೂರು
ನೂರು ಸಾವಿರ ಈಗ ಮಾಯದಲ್ಲಿ.
ಎಲ್ಲ ಒಂದಕ್ಕೊಂದು ಸೇರಿಕೊಂಡು
ದಟ್ಟವಾಗಿ, ನೀರ ಬೆಟ್ಟವಾಗಿ
ಸಾಗಿಬಂದವು ಮಾರಿಗಾಲಲ್ಲಿ ಜೋರಲ್ಲಿ
ಕಾಳವರ್ಷಿಣಿ ಕೂಗು ಹಾಕಿಕೊಂಡು.
ಬೆನ್ನ ಚಪ್ಪರಿಸಿ ಛೂ ಬಿಟ್ಟಿತೆಲ್ಲಿಂದಲೋ
ಮೇಲೆದ್ದು ಬಂದ ಮನೆಮುರುಕ ಗಾಳಿ
ಬಂತು ಬಂತೋ ಬಂತು ನಗುವ ನೆಲದೆದೆಗೆ
ಪ್ರಳಯ ಕಾಲದ ಮೊದಲ ಕಂತು ಎನುವಂತೆ
ಜಲದ ದಾಳಿ!
* * *

ಹಿಂದೆ ಇಷ್ಟಾದರೂ ಹಸಿರಿದ್ದ ನೆಲವೆ ಇದು?
ಕಾಲಿಟ್ಟ ಕಡೆಯೆಲ್ಲ ಕೆಸರು,
ಹರಿದ ಛಾವಣಿ ಮುರಿದುಬಿದ್ದ ಗಿಡಗಂಟಿ
ಒಡೆದ ಸೂರು.
ಬೀದಿ ಮನೆ ಅಂಗಡಿ ಚರಂಡಿ ಡೈನೇಜುಗಳ
ಒಂದುಗೂಡಿಸಿ ನಿತ ಹೊಲಸು ನೀರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...