ತುತ್ತೂರಿ

ಎಲ್ಲ ಬಿಟ್ಟು ಇದು ಇಲ್ಲಿಗೆ ಬಂತೆ?
ಅಕ್ಕಿ ತುಂಬ ಬರಿ ಕಲ್ಲಿನ ಸಂತೆ
ಕಾಲ ಚಪ್ಪಲಿ ಕಿರೀಟವ ಜಾಗ ಬಯಸಿ
ಕುರುಡುಬುದ್ದಿಗೆ ಕ್ರೌರ್‍ಯ ಪರಾಕು ಸಲ್ಲಿಸಿ
ಹುದುಕಿಟ್ಟಿದೆ ನಿನ್ನ ಹಟ್ಟಿಗೊಂದು ಹೆಸರ
ಎರಗುವ ಮಂಚೆ ಎರಚಲು ಮುಖಕ್ಕೆ ಕೆಸರ.

ತಾಳಿಕೊ ಮರಿ ತಾಳಿಕೊ
ಮೆಚ್ಚಿದ ಜೀವಗಳೆಲ್ಲ ಬಣ್ಣ ಬಿಚ್ಚುತ್ತಿರಲು
ಕಚ್ಚುವ ಸಂಕಟವನ್ನು ಮೆಟ್ಟಿಕೊ
ಅತ್ತಿಯ ಹಣ್ಣಂಥ ಚಿತ್ತ ಆಕಾರದ ಮರೆಯಲ್ಲಿ
ಹೊತ್ತ ಮೋಸಗಳಿವೆ ಜೋಪಾನ
ಜಾತಿನಾಯಿ ಹತ್ತಲು ಬೆಳೆಯುತ್ತಿದೆ ಸೋಪಾನ
ಸಿಡಿಯಲು ಕಾದಿದೆ ವಿಷದ ಕೊಡಪಾನ.

ಹಿತ್ತಾಳೆ ಕಿವಿಗಳಲ್ಲಿ ತುತ್ತೂರಿ ಬಾಯಿಗಳು
ಪರಾಕು ಸವರಿದ ಪಿಸುಣ ಗೀತಗಳು
ಬೆಳೆಯುತ್ತ ಹೋದಂತೆ ವಿಷವದನನ ಸಾಂತಾನ
ಕೊಳೆಯುತ್ತಿವೆ ಮನೆಯ ಸೌಖ್ಯಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತೊಳೆಯು ಬಾ ಬಸವ
Next post ಅರುಣೋದಯ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

cheap jordans|wholesale air max|wholesale jordans|wholesale jewelry|wholesale jerseys