ತ್ರಿಮೂರ್ತಿ

ಬೆಳಿಗ್ಗೆ ಪ್ರಗತಿಶೀಲರ ಸಭೆಯಲ್ಲಿ ಎಚ್ಚರಿಸಿದರು ಕವಿ :
“ಬಾನು ಭೂಮಿ ಒಂದೆ ಸಮ, ಹಳ್ಳ ಕಡಲು ಒಂದೆ ಸಮ
ಒಂದೆ ಸಮ ಒಂದೆ ಸಮ, ಕೊರಡು ಮರ ಒಂದೆ ಸಮ”

ಗುಡುಗಿದರು ಕವಿ ಮಧ್ಯಾಹ್ನ ಮೈಸೂರಿನ ಕುಕ್ಕೂಟ ಸಭೆಯಲ್ಲಿ :
“ವೈದಿಕ ಸಂಸ್ಕೃತಿ ಹುಸಿ,
ತಟ್ಟಿ ಅದರ ಬಿಸಿ
ಕಮರಿ ಹೋಗುತ್ತಿವೆ ನಾಡಿನ ಎಲ್ಲ ಮಾವು ನೇರಿಳೆ ಸಸಿ
ದೇಶದ ಉಜ್ವಲ ಮುಖದಲ್ಲಿ ಇದು ಮಹಾಮಸಿ”

ತೇಲಿತು ಕವಿವಾಣಿ ರಾತ್ರಿ ಕಮರ್ಷಿಯಲ್ ಬ್ರಾಡ್‌ಕಾಸ್ಟಿಂಗ್‌ನಲ್ಲಿ:
“ಪರಮಹಂಸರು ತಮ್ಮ ಬಿಲ್ಲಿನಲಿ ತೊಟ್ಟಂಥ ಬಾಣ ನೀನು
ಹೇ ವಿವೇಕಾನಂದ ನೀ ನಮ್ಮ ಸಂಸ್ಕೃತಿಯ ಕಾಮಧೇನು”

ಕವಿಯ ದಿಟ್ಟತನಕ್ಕೆ ಬೆಚ್ಚಿತು ಅಮಾವಾಸ್ಯೆಯ ಕಾರಿರುಳು
ಮಚ್ಚಿಗೆ ಸೂಸಿ ಎದ್ದಿತು ಕಾಂಪೌಂಡಿನಿಂದ ನಾಯಿ ಬೊಗಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನುತಿಸುವೆನು ಬಸವ
Next post ಹರಿವ ತೊರೆಯ ಅಲೆ

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

cheap jordans|wholesale air max|wholesale jordans|wholesale jewelry|wholesale jerseys