ದೀಪಗಳ ದಾರಿಯಲಿ

ದೀಪಗಳ ದಾರಿಯಲಿ ನಡುನಡುವೆ ನೆರಳು,
ನೆರಳಿನಲಿ ಸರಿವಾಗ ಯಾವುದೋ ಬೆರಳು
ಬೆನ್ನಿನಲ್ಲಿ ಹರಿದಂತೆ ಭಯಚಕಿತ ಜೀವ
ತಣ್ಣನೆಯ ಒಡಲಲ್ಲಿ ಬೆದರಿರುವ ಭಾವ.

ಆಸೆ ಕನಸುಗಳೆಲ್ಲ ತೀರಿದುವು ಕುಸಿದು,
ಭಾಷೆಗೂ ಸಿಗದಂಥ ಭಯದ ಮೆಳೆ ಬೆಳೆದು,
ಕಪ್ಪು ಮೋರೆಯ ಬೇಡ ಕರಿದಾರ ಹಿಡಿದು
ಪಕ್ಕದಲಿ ಹೋದನೇ ಪ್ರಾಣಕ್ಕೆ ಮುನಿದು?

ನಾಲಿಗೆಗೆ ಇರುಳ ಹನಿ ತಾಕಿತೋ ಹೇಗೆ?
ಕೊರಳ ಬಳಿ ಬಳ್ಳಿ ಸರಿದಾಡಿತೋ ಹೇಗೆ?
ನಟ್ಟಿರುಳಿನಲಿ ಯಾರೊ ಹಿಂದೆಯೇ ಬಂದು
ಥಟ್ಟನೇ ಹೆಗಲನ್ನು ಜಗ್ಗಿದರೊ ಹೇಗೆ?

ಅಯ್ಯೋ ದೇವರೆ ಎಂದು ಚೀರುವಂತಾಗಿ
ನಡುಕಗಳು ನಾಲಿಗೆಗೆ ಮೂಡದತಾಗಿ
ಬೆಚ್ಚುತಿರೆ ದೂರದಲಿ ಮತ್ತೆ ದೀಪಗಳು,
ಬೆಚ್ಚನೆಯ ಬೆಳಕಿನಲ್ಲಿ ಮತ್ತೆ ಕನಸುಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುರು ನಮನ
Next post ವಂದಿಸು ನೀ ಮೊದಲು

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys