Home / ಲೇಖನ / ಇತರೆ / ಅಂದದ ಮನೆಗೊಂದು ಚೆಂದದ ಹೆಸರು

ಅಂದದ ಮನೆಗೊಂದು ಚೆಂದದ ಹೆಸರು

ನನ್ನ ಚಡ್ಡಿ ದೋಸ್ತು ಮಲ್ಲು ಬೆಂಗಳೂರಿನಲ್ಲಿ ಬನಶಂಕರಿಯ ಏರಿಯಾದಲ್ಲಿ ಒಂದು ೪೦-೩೦ ಸೈಟ್ ಬಹಳ ಹಿಂದೆಯೇ ಖರೀದಿಸಿದ್ದ. ‘ಐಟಿ-ಬಿಟಿ’ ಖ್ಯಾತಿ ಇಂದಾಗಿ ಸೈಟು ಮನೆಗಳ ಬೆಲೆಗಳು ಆಕಾಶದತ್ತ ಜಿಗಿಯ ಹತ್ತಿದವು. ಮನೆ ಕಟ್ಟಲು ಈಗ ಸಮಯ ಸೂಕ್ತವಾಗಿದೆ ಎಂದೂ ಇನ್ನೂ ತಡ ಮಾಡುವುದು ಸರಿಯಲ್ಲವೆಂದೂ ತೀರ್ಮಾನಿಸಿ ದಂಪತಿಗಳಿಬ್ಬರಿಗೂ ಇಷ್ಟವಾಗುವಂತೆ ಪ್ಲಾನ್ ಬರೆಸಿ ಲೋನ್ ಸ್ಯಾಂಕ್ಷನ್ ಮಾಡಿಸಿಕೊಂಡ. ಗುದ್ದಲಿ ಪೂಜೆಯೂ ನೆರವೇರಿತು. ಆರು ತಿಂಗಳುಗಳ ಒಳಗೆ ‘ಗೃಹ ಪ್ರವೇಶ’ ಮಾಡುವಷ್ಟರ ಮಟ್ಟಿಗೆ ಕಟ್ಟಡ ಮೇಲೆದ್ದಿತು. ಸೂಕ್ತವಾದ ಹೆಸರು ಅವನಿಗೆ ಸಿಕ್ಕಿರಲಿಲ್ಲ. ಸ್ನೇಹಿತರುಗಳ ಬಳಿ ಪ್ರಸ್ತಾಪಿಸಿದ. ಕೆಲವು ಹೆಸರುಗಳು ಸೂಚಿಸಲ್ಪಟ್ಟರೂ ಸೂಕ್ತವಾಗಿರಲಿಲ್ಲ. “ಆ ಕೆಲಸವನ್ನು ಪುರೋಹಿತರಿಗೆ ಬಿಟ್ಟು ಬಿಡು; ಅವರೇ ನಿನ್ನ ಜಾತಕ ನೋಡುತ್ತಾ ಒಳ್ಳೆಯ ಹೆಸರು ಸೂಚಿಸಿಬಿಡುತ್ತಾರೆ.” ಎಂದು ನಾನು ಹೇಳಿದೆ.

“ಲೇ ಮಲ್ಲೀ, ಇವತ್ತು ಆಫೀಸಿನಿಂದ ಸಂಜೆ ಬೇಗ ಬರುತ್ತೇನೆ; ಪುರೋಹಿತರ ಮನೆಗೆ ಹೋಗಿ ‘ಗೃಹ ಪ್ರವೇಶ’ದ ಲಗ್ನ ಇಡಿಸಬೇಕು ಸಿದ್ಧವಾಗಿರು” ಎಂದು ಹೆಂಡತಿಗೆ ಹೇಳಿದ. ಇಬ್ಬರೂ ಸಂಜೆ ಪುರೋಹಿತರ ಮನೆ ಕಡೆ ಹೆಜ್ಜೆ ಹಾಕಿದರು.

ದಾರಿಯಲ್ಲಿ ಮಲ್ಲಿ ಗಂಡನನ್ನು ಮಾತಿಗೆ ಎಳೆದಳು. “ರೀ, ಮನೆಗೆ ಒಂದು ಒಳ್ಳೆಯ ಹೆಸರು ಇಡಬೇಕು; ಅದು ಹೇಗಿರಬೇಕು ಎಂದರೇ ಹಿಂದೆ ಯಾರೂ ಇಟ್ಟಿರಬಾರದು; ಅಪರೂಪದ್ದಾಗಿರಬೇಕು.” ಎಂದಳು. “ನಾನು ನನ್ನ ಸ್ನೇಹಿತರೊಂದಿಗೆ ಈ ವಿಚಾರ ಪ್ರಸ್ತಾಪ ಮಾಡಿದೆ; “ಇದನ್ನು ಪುರೋಹಿತರ ವಿವೇಚನಗೆ ಬಿಟ್ಟುಬಿಡು; ಏಕೆಂದರೆ ಶಾಸ್ತ್ರ ಸಮ್ಮತವಾಗಿರಬೇಕು. ಅವರೇ ಒಳ್ಳೆಯ ಹೆಸರು ಸೂಚಿಸುತ್ತಾರೆ ಎಂದರು. “ನಾವು ‘ಗೃಹಪ್ರವೇಶ’ಕ್ಕೆ ದಿನ ಗೊತ್ತು ಮಾಡಿದ ಬಳಿಕ ಇದನ್ನು ಪ್ರಸ್ತಾಪಿಸೋಣ.” ಎಂದ. ಪುರೋಹಿತರ ಮನೆ ಬಾಗಿಲು ತಟ್ಟಿದಾಗ ಅವರೇ ಖುದ್ದಾಗಿ ಅತಿಥಿಗಳನ್ನು ಒಳಕ್ಕೆ ಸ್ವಾಗತಿಸಿದರು. ಬಂದಿದ್ದ ಕಾರಣವನ್ನೆಲ್ಲಾ ವಿಶದವಾಗಿ ತಿಳಿಸಿದಾಗ ತುಂಬಾ ಸಂತೋಷಪಟ್ಟರು. ದಂಪತಿಗಳ ಚಾತಕಗಳನ್ನು ಪರಿಶೀಲಿಸಿದರು. ರಾಶಿ ನಕ್ಷತ್ರ, ಜನ್ಮಲಗ್ನ, ಎಲ್ಲವನ್ನೂ ಜಾಲಾಡಿ, ಮೀನಾ ಮೇಷ ಎಂದೆಲ್ಲಾ ಬೆರಳಾಡಿಸಿ ಸೂಕ್ತವಾದ ದಿನವನ್ನು, ಮುಹೂರ್ತದ ವೇಳೆಯನ್ನು ತಿಳಿಸಿದರು. ದಂಪತಿಗಳಿಗೆ ಒಪ್ಪಿಗೆ ಆಯಿತು.

“ಇದಲ್ಲಾ ಸರಿ ಹೋಯಿತು. ಆದರೆ ನಮ್ಮಮನೆಗೆ ಅಂದರೆ ಈಗ ಕಟ್ಟುತ್ತಿರುವ ಮನೆಗೆ ಸೂಕ್ತ ಹೆಸರು ಸರಿಯಾದ್ದು ಯಾವುದೂ ಸಿಕ್ತಿಲ್ಲ, ಒಳ್ಳೆಯ ಹೆಸರೊಂದನ್ನು ಸೂಚಿಸಿ. ಆದರೆ ಆ ಹೆಸರು ಸೂಕ್ತವಾಗಿರಬೇಕು. ಪೇಟೆಯಲ್ಲಿ ಹೆಸರುಗಳನ್ನು ಸೂಚಿಸುವ ಪುಸ್ತಕಗಳೇ ಖರೀದಿಗೆ ಸಿಗುತ್ತವೆ. ಅದರಲ್ಲಿ ಕಣ್ಣಾಡಿಸಿದಕ್ಕೆ ಒಂದೂ ಚಂದದ ಹೆಸರು ಸಿಗಲಿಲ್ಲ.” ಮಲ್ಲಿ ಮಾತು ಸೇರಿಸಿದಳು.

ಚಂದದ ಹೆಸರಿಗಾಗಿ ಪುರೋಹಿತರು ಮತ್ತೆ ಪಂಚಾಂಗದ ಮೊರೆ ಹೊಕ್ಕರು. ಕೊನೆಗೂ ಪರಿಹಾರ ದೊರೆಯಿತು. “ನೋಡಮ್ಮಾ ನಿಮ್ಮ ಹಾಗೂ ನಿಮ್ಮ ಯಜಮಾನರಿಗೆ ಪಂಚಾಂಗದ ಶಾಸ್ತ್ರದ ಪ್ರಕಾರ ಹೆಸರಿನ ಮೊದಲಕ್ಷರ ‘ಬ’ ಎಂದು ಆರಂಭವಾಗಬೇಕು. ಕಾಗುಣಿತದ ಅಭ್ಯಂತರವಿಲ್ಲ. ಉದಾಹರಣೆಗೆ ‘ಭಾಮಿನಿ’, ‘ಭಾನು’, ‘ಭಾಗ್ಯ ಲಕ್ಷ್ಮಿ’ ಎಂದೆಲ್ಲಾ ಆಗಬಹುದು. ‘ಬೆನಕ’ ಎಂದೂ ಆಗಬಹುದು.” ಎಂದು ಪುರೋಹಿತರು ಮಲ್ಲಿಯ ಗಮನ ಸೆಳೆದು ನುಡಿದರು. ‘ಈ ಹೆಸರುಗಳು ಮಾಮೂಲಿಯವು; ಕೊಂಚ ಅಪರೂಪವಾಗಿದ್ದರೆ ಚೆಂದ” ಎಂದಳು ಮಲ್ಲಿ. “ಹಾಗಾದರೆ ‘ಭುವನಜ’ ಅಥವಾ ‘ಭುವನೇಶ್ವರಿ’ ಆಗಬಹುದೋ” ಕೇಳಿದರು ಪುರೋಹಿತರು. ಮಲ್ಲಿ ಮಲ್ಲರು ಈ ಹೆಸರುಗಳನ್ನು ಒಪ್ಪಲಿಲ್ಲ. ಪುರೋಹಿತರಿಗೆ ಚಿಂತೆಗೆ ಇಟ್ಟುಕೊಂಡಿತು. ‘ಬ’ಕಾರ ಸೂಚಿಸಿದರೆ ನನ್ನನ್ನು ಒಳ್ಳೆ ‘ಬಕರನನ್ನಾಗಿ ಮಾಡುತ್ತಿದ್ದಾರಲ್ಲಾ’ ಎಂದು ಮನಸ್ಸಿನಲ್ಲೇ ನೊಂದುಕೊಂಡರು.

“ನೋಡಮ್ಮಾ ಏನೋ ಒಂದು ಒಳ್ಳೆಯ ಹೆಸರು ಇಟ್ಟರಾಯಿತು. ಇದಕ್ಕೆ ತಲೆಬಿಸಿ ಮಾಡಿಕೊಳ್ಳುವುದು ಏನೂ ಇಲ್ಲ; ಬೆಂಗಳೂರಿನಲ್ಲಿ ಒಂದು ಸೈಟು ಹೊಂದಿರುವುದೇ ಈಗ ಪ್ರೆಸ್ವೀಜ್ ಪ್ರಶ್ನೆ. ಅದರಲ್ಲೂ ನೀವು ಮನೆ ಕಟ್ಟಿರುತ್ತೀರಿ. ಭಾರೀ ಆಸ್ತಿವಂತರಾಗಿ ಬಿಟ್ಟರಿ. ಮನೆ ಎಂದರೆ – ಅದೂ ಸ್ವಂತದ್ದು ಎಂದ ಮೇಲೆ ಏನೆಂದು ತಿಳಿದಿರಿ; ನಿಮಗೆ ಪಾಪ, ತಿಳಿಯದು. ಅದೊಂದು ‘ಬೆಲೆ ಬಾಳುವ ರತ್ನ’ ಕಣಮ್ಮಾ. ಈಗ ನಿಮ್ಮ ಮೈ ಮೇಲೆ ಧರಿಸುವ ಚಿನ್ನದ ಒಡವೆಗಳು, ಬೆಳ್ಳಿ ಸಾಮಾನುಗಳು, ವಜ್ರ-ವೈಡೂರ್ಯ ಯಾವುದೇ ಇರಲಿ ಅದೆಲ್ಲವುಗಳಿಗಿಂತ ಹೆಚ್ಚು ‘ಬೆಲೆ ಬಾಳುವ ರತ್ನ’ವಲ್ಲದೆ ಮತ್ತೇನು? ಈ ದಿನದ ಬೆಲೆಗೆ ಮುಂದೆ ಒಂದು ದಿನ ಯಾರಾದರೂ ಖರೀದಿಸಲು ಕೇಳಿದರೆ ನೀವು ಈ ಬೆಲೆಗೇ ಕೊಟ್ಟು ಬಿಡುತ್ತೀರಾ?” ಎಂದೆಲ್ಲಾ ಪುರೋಹಿತರು ಕೊರೆದಾಗ ದಂಪತಿಗಳಿಬ್ಬರಿಗೂ ಜ್ಞಾನೋದಯವಾಯ್ತ. “ಹೌದು, ಪುರೋಹಿತರೇ ನಮಗೆ ಸಿಕ್ಕೇ ಬಿಟ್ಟತು!” ಇಬ್ಬರೂ ಒಕ್ಕೊರಳಲ್ಲಿ ನುಡಿದರು. “ಏನು ಆ ಹೆಸರು?” ಪುರೋಹಿತರು ಕೇಳಿದರು. “ಅದೇ ನೀವು ಹೇಳಿದಿರಲ್ಲಾ ‘ಬೆಲೆ ಬಾಳುವ ರತ್ನ’ ಅದನ್ನೇ ಮನಗೆ ಇಟ್ಟು ಬಿಡುತ್ತೇವೆ” ಎಂದರು. ಪುರೋಹಿತರಿಗೂ ಒಪ್ಪಿಗೆಯಾಯಿತು. ಅಂದದ ಮನೆಗೆ ಚಂದದ ಹೆಸರು ಸಿಕ್ಕಿದ್ದಾಕ್ಕಾಗಿ ಪುರೋಹಿತರಿಗೆ ವಂದಿಸಿದರು. ‘ಗ್ರಹಪ್ರವೇಶಕ್ಕೆ’ ಬಂದು ಆಮಂತ್ರಿಸಿದಾಗ ಬಂದು ಕಾರ್ಯ ನೆರವೇರಿಸಿ ಕೊಡಬೇಕೆಂದು ಪ್ರಾರ್ಥಿಸಿದರು. ಕಾಫಿ ಆತಿಥ್ಯ ಪಡೆದು ದಂಪತಿಗಳು ಜಾಗ ಖಾಲಿ ಮಾಡಿದರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...