ಲಿಂಗಮ್ಮನ ವಚನಗಳು – ೩೪

ನಾಮ ರೂಪು ಕ್ರಿಯೆಗಿಲ್ಲದ ಘನವ
ನಾಮರೂಪಿಂಗೆ ತಂದಿರಯ್ಯ.
ಅದೇನು ಕಾರಣವೆಂದರೆ,
ನನ್ನ ಮನಕ್ಕೆ ಚನ್ನಮಲ್ಲೇಶ್ವರನಾದಿರಿ.
ಹೀಗೆಂದು ನಿಮ್ಮ ನಾಮಾಂಕಿತ
ಹೀಗಾದರೂ ಕಾಣಲರಿಯರು.
ನಡೆ ನುಡಿ ಚೈತನ್ಯವಿಡಿದು,
ಕರದಲ್ಲಿ ಲಿಂಗ ಪಿಡಿದು,
ಚನ್ನಮಲ್ಲೇಶ್ವರನೆಂಬ ನಾಮಾಂಕಿತವಿಡಿದು
ಬರಲಾಗಿ ಮರ್ತ್ಯಲೋಕದಲ್ಲಿ ತನ್ನ ನೆನವ
ಶಿವ ಭಕ್ತರ ಪಾವನವ ಮಾಡಬೇಕೆಂದು ಬಂದು,
ಭೂಮಿಯ ಮೇಲೆ ಲೀಲೆಯ ನಟಿಸಿ,
ತಮ್ಮ ಪಾದದಲ್ಲಿ ನಿಜಮುಕ್ತಳ ಮಾಡಿದಿರಯ್ಯ
ಚನ್ನಮಲ್ಲೇಶ್ವರನು ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಂಚ
Next post ಓಂ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…