Home / ಲೇಖನ / ವಿಜ್ಞಾನ / ಅಡಿಕೆ ಸುಲಿಯುವ ಯಂತ್ರ

ಅಡಿಕೆ ಸುಲಿಯುವ ಯಂತ್ರ

ಅಡಿಕೆ ಸುಲಿಯುವುದು ಅತ್ಯಂತ ಕಷ್ಟಕರ ಕೆಲಸ. ಒಂದೇ ಗೊನೆಯಲ್ಲಿ ನಾನಾ ಬಗೆಯ ಅವಸ್ಥೆಯ ಅಡಿಕೆಗಳಿರುತ್ತವೆ. ಇವುಗಳನ್ನೆಲ್ಲ ಒಂದೊಂದಾಗಿ ಬಿಡಿಸಿ ಕಾಯಿಯಾದುದ್ದನ್ನು ಅಯ್ಕೆ ಮಾಡಿ ಸುಲಿಯುವುದಕ್ಕೆ ಸಮಯ ಹಿಡಿಯುತ್ತದೆ. ಮತ್ತು ಕೈ ಬೆರಳುಗಳಿಗೆ ಗಾಯವಾಗುವ ಸಂಭವಗಳೂ ಇವೆ. ಇಂತಹ ಸಂದರ್ಭದಲ್ಲಿ ಸಮಯದ ಮಿತಿಯೊಳಗೆ ಸ್ವಚ್ಛಂಧವಾಗಿ ಅಡಿಕೆ ಸುಲಿಯುವ ಯಂತ್ರವನ್ನು ಪ್ರಪ್ರಥಮವಾಗಿ ತಯಾರಿಸಿ ಅಡಿಕೆ ಬೆಳೆಗಾರರಿಗೆ ಅನುಕೂಲ ಮಾಡಿಕೊಟ್ಟವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ನರಸಿಂಹ ಬಂಡಾರಿಯವರು, ಇದಕ್ಕಾಗಿ ಹಲವು ವರ್ಷ ಇವರು ಶ್ರಮಪಟ್ಟಿದ್ದಾರೆ.

ಈ ಯಂತ್ರದ ತಿರುಗುವ ಚಕ್ರಕ್ಕೆ ಯಾವುದೇ ಗಾತ್ರದ ಅಡಿಕೆ ಕೊಟ್ಟರೂ ಅದು ಸುಲಿದು ಸಿಪ್ಪೆಯನ್ನು ಬೇರೆಯಾಗಿಸುತ್ತದೆ. ಮನುಷ್ಯರು ಸುಲಿಯುವ ಮೂರರಷ್ಟು ಈ ಯಂತ್ರ ಅಡಿಕೆ ಸುಲಿಯುತ್ತದೆ. ಗೋಟಡಿಕೆ ಸುಲಿಯಲಂತೂ ಈ ಯಂತ್ರ ಅತ್ಯಂತ ಅನುಕೂಲವಾಗಿದೆ. ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಎನ್ನುವ ಸಂಸ್ಥೆಯ ಸಹಕಾರದಿಂದ ಈ ಯಂತ್ರವನ್ನು ಬಂಡಾರಿಯವರು ತಯಾರಿಸಿದ್ದಾರೆ.

ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ತನ್ನ ಪ್ರಥಮ ಮಟ್ಟದ ರಾಷ್ಟ್ರೀಯ ಪ್ರಶಸ್ತಿಯನ್ನು ಕೂಡ ಇವರುಗಳಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...