ಲಿಂಗಮ್ಮನ ವಚನಗಳು – ೩೫

ಅಯ್ಯ ನರರೊಳು ಹುಟ್ಟಿ,
ಮರಹಿನೊಳಗೆ ಬಿದ್ದು, ಒಳತಂದು ಮಹಾಶರಣರೊಳು
ಎನ್ನ ನಿಲಿಸಿ ಕುರುಹ ತೋರಿದರು.
ಗುರುವೆಂಬುದನರುಹಿದರು.  ಜಂಗಮವೆಂಬುದನರುಹಿದರು.
ಅವರ ನೆಲೆವಿಡಿದು ಮನವ ನಿಲಿಸದೆ,
ಕಾಯಜೀವವೆಂಬುದನರಿದೆ.  ಭವಬಂಧನವ ಹರಿದೆ.
ಮನವ ನಿರ್ಮಳವ ಮಾಡಿದೆ.  ಬೆಳಗಿದ ದರ್ಪಣದಂತೆ,
ಚಿತ್ತ ಶುದ್ಧವಾದಲ್ಲಿ, ನೀವು ಅಚ್ಚೊತ್ತಿದ್ದ
ಕಾರಣದಿಂದ ನಿಮ್ಮ ಪಾದವಿಡಿದು ನಾ
ನಿಜಮುಕ್ತಳಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಯೋಗ ಶಾಲೆ
Next post ಒಂದು ಪೇಟೆಯೆಂದರೆ

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…